ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm