Udupi Murder, Brahmavar, Update: ಕುಡಿದ ಮತ್ತಿನಲ್ಲಿ ಸ್ನೇಹಿತರ ಜಗಳ ; ಕೈಯಿಂದ ತಲೆ ಹಿಂಬದಿಗೆ ಹೊಡೆದ ಪೆಟ್ಟಿಗೆ ಕುಸಿದು ಬಿದ್ದು ಯುವಕ ಸಾವು, ಜೈಲು ಪಾಲಾದ ಕೋಟತಟ್ಟಿನ ಕುಚಿಕು ಗೆಳೆಯರು 

15-12-25 05:37 pm       Udupi Correspondent   ಕ್ರೈಂ

ಕೋಟತಟ್ಟು ಪಡುಕರೆ ಎಂಬಲ್ಲಿ ನಡೆದ ಸಂತೋಷ್ ಮೊಗವೀರ (30) ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ನಾಲ್ವರು ಆಪ್ತ ಸ್ನೇಹಿತರನ್ನು ಬಂಧಿಸಿದ್ದಾರೆ.

ಉಡುಪಿ, ಡಿ.15 : ಕೋಟತಟ್ಟು ಪಡುಕರೆ ಎಂಬಲ್ಲಿ ನಡೆದ ಸಂತೋಷ್ ಮೊಗವೀರ (30) ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ನಾಲ್ವರು ಆಪ್ತ ಸ್ನೇಹಿತರನ್ನು ಬಂಧಿಸಿದ್ದಾರೆ.

ಪಾರಂಪಳ್ಳಿ ಪಡುಕರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು. 

ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ ನಲ್ಲಿ ಪಾರ್ಟಿ ಮಾಡಿ, ಬಳಿಕ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ್ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ವಾಗ್ವಾದ ಆಗಿ ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.

ಹೊಡೆದಾಟದ ವೇಳೆ ದರ್ಶನ್, ಸಂತೋಷ್ ಕುತ್ತಿಗೆ ಹಿಂಬದಿಗೆ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡ ಕೈಯಿಂದ ಹೊಡೆದಿದ್ದಾನೆ. ಬಳಿಕ ರಜತ್ ಇವರ ಜಗಳವನ್ನು ನಿಲ್ಲಿಸಿದ್ದು ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್‌ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. 

ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In a tragic incident triggered by a drunken argument, a 30-year-old man lost his life after being assaulted by his close friends at Kotathattu Padukere in Brahmavar taluk. Police have arrested four youths in connection with the case.