ಬ್ರೇಕಿಂಗ್ ನ್ಯೂಸ್
21-12-25 09:36 pm Mangalore Correspondent ಕ್ರೈಂ
ಮಂಗಳೂರು, ಡಿ.21 : ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡ ಕಟ್ಟುವಂತೆ ಮೊಬೈಲಿಗೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿರುವ ಬಗ್ಗೆ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರಿಗೆ ಡಿ.4ರಂದು ಮೊಬೈಲ್ ಸಂದೇಶ ಬಂದಿದ್ದು, ಅದನ್ನು ನಂಬಿ ಆರ್ಟಿಒ ಹೆಸರಿನಲ್ಲಿದ್ದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ್ದಾರೆ. ಬಳಿಕ ಅದು ವಂಚನಾ ಜಾಲದ ಲಿಂಕ್ ಎಂದು ತಿಳಿದು ಅದೇ ದಿನ ಡಿಲೀಟ್ ಮಾಡಿದ್ದಾರೆ. ಆದರೆ ಡಿ.16ರಂದು ಅವರ ಖಾತೆಯಿಂದ 99 ಸಾವಿರ ಹಾಗೂ 44 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ಬ್ಯಾಂಕ್ ಸಿಬಂದಿ ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೋವಾಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿ.3ರಂದು ಸಂಜೆ ಅವರ ವಾಟ್ಸ್ ಆ್ಯಪ್ ಗೆ ಅಪರಿಚಿತ ಸಂಖ್ಯೆಯಿಂದ ಆರ್ ಟಿಓ ದಂಡ ಇರುವ ಬಗ್ಗೆ ಮೆಸೇಜ್ ಬಂದಿದೆ. ಅದರಲ್ಲಿ ಎಪಿಕೆ ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಚಲನ್ ಹಣ ಪಾವತಿ ಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಫೋಟೊ, ವಿಡಿಯೋ ನೋಡಲು ಮೆಸೇಜ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಅದನ್ನು ಡೌನ್ ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲಿಗೆ ಹಲವು ಓಟಿಪಿಗಳು ಬಂದಿವೆ. ಈ ಎಲ್ಲ ಓಟಿಪಿಗಳು ಅಪರಿಚಿತ ನಂಬರ್ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿದ್ದವು. ಇದೇ ವೇಳೆ ಅವರ ಕ್ರೆಡಿಟ್ ಕಾರ್ಡ್ಗಳಿಂದ ಒಟ್ಟು 5,85,084 ರೂ.ವನ್ನು ಸೈಬರ್ ವಂಚಕರು ಶಾಪಿಂಗ್ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಿದ್ದಾರೆ. ಮಂಗಳೂರಿಗೆ ಬಂದ ಬಳಿಕ ಅವರಿಗೆ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದುಬಂದಿದ್ದು ಆ್ಯಪ್ ಡಿಲೀಟ್ ಮಾಡಿ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
Cyber fraudsters have cheated two city residents of ₹1.43 lakh and ₹5.85 lakh in separate incidents after tricking them into downloading malicious APK files sent under the guise of traffic fine notices. Cases have been registered at the Surathkal and Pandeshwar police stations.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm