ಬ್ರೇಕಿಂಗ್ ನ್ಯೂಸ್
21-12-25 09:36 pm Mangalore Correspondent ಕ್ರೈಂ
ಮಂಗಳೂರು, ಡಿ.21 : ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡ ಕಟ್ಟುವಂತೆ ಮೊಬೈಲಿಗೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿರುವ ಬಗ್ಗೆ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರಿಗೆ ಡಿ.4ರಂದು ಮೊಬೈಲ್ ಸಂದೇಶ ಬಂದಿದ್ದು, ಅದನ್ನು ನಂಬಿ ಆರ್ಟಿಒ ಹೆಸರಿನಲ್ಲಿದ್ದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ್ದಾರೆ. ಬಳಿಕ ಅದು ವಂಚನಾ ಜಾಲದ ಲಿಂಕ್ ಎಂದು ತಿಳಿದು ಅದೇ ದಿನ ಡಿಲೀಟ್ ಮಾಡಿದ್ದಾರೆ. ಆದರೆ ಡಿ.16ರಂದು ಅವರ ಖಾತೆಯಿಂದ 99 ಸಾವಿರ ಹಾಗೂ 44 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ಬ್ಯಾಂಕ್ ಸಿಬಂದಿ ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೋವಾಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿ.3ರಂದು ಸಂಜೆ ಅವರ ವಾಟ್ಸ್ ಆ್ಯಪ್ ಗೆ ಅಪರಿಚಿತ ಸಂಖ್ಯೆಯಿಂದ ಆರ್ ಟಿಓ ದಂಡ ಇರುವ ಬಗ್ಗೆ ಮೆಸೇಜ್ ಬಂದಿದೆ. ಅದರಲ್ಲಿ ಎಪಿಕೆ ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಚಲನ್ ಹಣ ಪಾವತಿ ಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಫೋಟೊ, ವಿಡಿಯೋ ನೋಡಲು ಮೆಸೇಜ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಅದನ್ನು ಡೌನ್ ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲಿಗೆ ಹಲವು ಓಟಿಪಿಗಳು ಬಂದಿವೆ. ಈ ಎಲ್ಲ ಓಟಿಪಿಗಳು ಅಪರಿಚಿತ ನಂಬರ್ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿದ್ದವು. ಇದೇ ವೇಳೆ ಅವರ ಕ್ರೆಡಿಟ್ ಕಾರ್ಡ್ಗಳಿಂದ ಒಟ್ಟು 5,85,084 ರೂ.ವನ್ನು ಸೈಬರ್ ವಂಚಕರು ಶಾಪಿಂಗ್ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಿದ್ದಾರೆ. ಮಂಗಳೂರಿಗೆ ಬಂದ ಬಳಿಕ ಅವರಿಗೆ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದುಬಂದಿದ್ದು ಆ್ಯಪ್ ಡಿಲೀಟ್ ಮಾಡಿ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
Cyber fraudsters have cheated two city residents of ₹1.43 lakh and ₹5.85 lakh in separate incidents after tricking them into downloading malicious APK files sent under the guise of traffic fine notices. Cases have been registered at the Surathkal and Pandeshwar police stations.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm