ಬ್ರೇಕಿಂಗ್ ನ್ಯೂಸ್
21-12-25 09:36 pm Mangalore Correspondent ಕ್ರೈಂ
ಮಂಗಳೂರು, ಡಿ.21 : ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡ ಕಟ್ಟುವಂತೆ ಮೊಬೈಲಿಗೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿರುವ ಬಗ್ಗೆ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರಿಗೆ ಡಿ.4ರಂದು ಮೊಬೈಲ್ ಸಂದೇಶ ಬಂದಿದ್ದು, ಅದನ್ನು ನಂಬಿ ಆರ್ಟಿಒ ಹೆಸರಿನಲ್ಲಿದ್ದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ್ದಾರೆ. ಬಳಿಕ ಅದು ವಂಚನಾ ಜಾಲದ ಲಿಂಕ್ ಎಂದು ತಿಳಿದು ಅದೇ ದಿನ ಡಿಲೀಟ್ ಮಾಡಿದ್ದಾರೆ. ಆದರೆ ಡಿ.16ರಂದು ಅವರ ಖಾತೆಯಿಂದ 99 ಸಾವಿರ ಹಾಗೂ 44 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ಬ್ಯಾಂಕ್ ಸಿಬಂದಿ ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೋವಾಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿ.3ರಂದು ಸಂಜೆ ಅವರ ವಾಟ್ಸ್ ಆ್ಯಪ್ ಗೆ ಅಪರಿಚಿತ ಸಂಖ್ಯೆಯಿಂದ ಆರ್ ಟಿಓ ದಂಡ ಇರುವ ಬಗ್ಗೆ ಮೆಸೇಜ್ ಬಂದಿದೆ. ಅದರಲ್ಲಿ ಎಪಿಕೆ ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಚಲನ್ ಹಣ ಪಾವತಿ ಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಫೋಟೊ, ವಿಡಿಯೋ ನೋಡಲು ಮೆಸೇಜ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಅದನ್ನು ಡೌನ್ ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲಿಗೆ ಹಲವು ಓಟಿಪಿಗಳು ಬಂದಿವೆ. ಈ ಎಲ್ಲ ಓಟಿಪಿಗಳು ಅಪರಿಚಿತ ನಂಬರ್ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿದ್ದವು. ಇದೇ ವೇಳೆ ಅವರ ಕ್ರೆಡಿಟ್ ಕಾರ್ಡ್ಗಳಿಂದ ಒಟ್ಟು 5,85,084 ರೂ.ವನ್ನು ಸೈಬರ್ ವಂಚಕರು ಶಾಪಿಂಗ್ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಿದ್ದಾರೆ. ಮಂಗಳೂರಿಗೆ ಬಂದ ಬಳಿಕ ಅವರಿಗೆ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದುಬಂದಿದ್ದು ಆ್ಯಪ್ ಡಿಲೀಟ್ ಮಾಡಿ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
Cyber fraudsters have cheated two city residents of ₹1.43 lakh and ₹5.85 lakh in separate incidents after tricking them into downloading malicious APK files sent under the guise of traffic fine notices. Cases have been registered at the Surathkal and Pandeshwar police stations.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm