ಬ್ರೇಕಿಂಗ್ ನ್ಯೂಸ್
26-12-25 10:44 pm Bangalore Correspondent ಕ್ರೈಂ
ಬೆಂಗಳೂರು, ಡಿ.26 : ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಬೇಸತ್ತು ನವವಿವಾಹಿತ ತರುಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲದ ಪೀಣ್ಯ ಮೂಲದ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಪ್ರಕರಣ ಸಂಬಂಧಿಸಿ ಆಕೆಯ ಪತಿ ಲಿಖಿತ್ ಸಿಂಹ, ಗಂಡನ ಸಹೋದರ ವರುಣ್ ಸಿಂಹ, ತಾಯಿ ಅರುಣಾ ಸಿಂಹರನ್ನು ಬಂಧಿಸಲಾಗಿದೆ.
ಐಶ್ವರ್ಯಾ ಬುಧವಾರ ಸಂಜೆ ತನ್ನ ಮನೆಯಲ್ಲೇ ಅನುಮಾನಾಸ್ಪದ ರೀತಿ ಮೃತಪಟ್ಟಿದ್ದಾರೆ. ಐಶ್ವರ್ಯ ತಂದೆ ಕೃಷ್ಣ ವರದಕ್ಷಿಣೆ ಹಾಗೂ ಹಲ್ಲೆ ಆರೋಪದಡಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯ ಎಂಬಿಎ ವ್ಯಾಸಂಗ ಮಾಡಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹನನ್ನು ಅಕ್ಟೋಬರ್ 26ರಂದು ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲೇ ಹೆಚ್ಚಿನ ಚಿನ್ನಾಭರಣಕ್ಕೆ ಬೇಡಿಕೆ ಇಟ್ಟಿದ್ದರು. ಮದುವೆಗೆ 18 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ, ಮದುವೆಯಾದ 15 ದಿನಕ್ಕೆ ಪತಿ ಮತ್ತು ಆತನ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ, ಆಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಿಂದ ಬೇಸತ್ತ ಆಕೆ ತವರು ಮನೆಗೆ ಹೋಗಿ, ಪೋಷಕರ ಬಳಿ ಹೇಳಿಕೊಂಡಿದ್ದರು.

ಬಳಿಕ ಡಿ.24ರಂದು ಬೆಳಗ್ಗೆ ಆಕೆಯ ಪೋಷಕರು ಗಂಡನ ಮನೆಗೆ ಬಂದು ರಾಜಿ ಸಂಧಾನ ಮಾಡಿ ಹೋಗಿದ್ದರು. ಲಿಖಿತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾಗೆ ಕಿರುಕುಳ ಕೊಡುತ್ತಿದ್ದರು. ಲಿಖಿತ್, ಪತ್ನಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ನಿಂದಿಸುತ್ತಿದ್ದರು. ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಲಿಖಿತ್ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು. ಆದರೆ, ಅದೇ ದಿನ ರಾತ್ರಿ 8 ಗಂಟೆ ಸುಮಾರಿಗೆ ಲಿಖಿತ್ ಕರೆ ಮಾಡಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾಗಿ ಯುವತಿ ಪೋಷಕರು ಆರೋಪಿಸಿದ್ದಾರೆ.
A 26-year-old newly married woman, Aishwarya from Nagamangala’s Peenya area, died by suicide at her husband’s residence in Bagalagunte, Bengaluru, allegedly due to dowry harassment and domestic abuse. Police have arrested her husband Likhith Singh, his brother Varun Singh, and their mother Aruna Singh following a complaint from Aishwarya’s father, Krishna.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm