ಬ್ರೇಕಿಂಗ್ ನ್ಯೂಸ್
31-12-25 05:48 pm Mangalore Correspondent ಕ್ರೈಂ
ಪುತ್ತೂರು, ಡಿ.31 : ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿರುವ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್ ಸ್ವಾತಿ ರಾವ್ (25) ಎಂಬವರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಡಿ.17ರಂದು ಮನೆಗೆ ನುಗ್ಗಿದ ಆರೋಪಿಗಳು ಎ.ವಿ ನಾರಾಯಣ ಮತ್ತು ಅವರ ಪತ್ನಿಯನ್ನು ಬೆದರಿಸಿ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ, ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು ಹೆದರಿಕೆಯಿಂದ ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿದ್ದಾರೆ. ಮನೆಯಿಂದ ಯಾವುದೇ ಕಳ್ಳತನ ಆಗಿರುವುದಿಲ್ಲ. ಆದರೆ ಯಾರೋ ಇಬ್ಬರು ಸೇರಿ ಕಳವಿಗೆ ಯತ್ನಿಸಿದ್ದಾರೆ ಎಂದು ನಾರಾಯಣ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಆರೋಪಿ ದಂಪತಿಯನ್ನು ಮತ್ತು ಅವರು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದು ಎವಿ ನಾರಾಯಣ ಅವರ ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವ ಬಗ್ಗೆ ಮಾಹಿತಿ ತಿಳಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಹೆಲ್ಮೆಟ್ ಹಾಕಿ ಮನೆಯ ಒಳಗೆ ನುಗ್ಗಿದ್ದು ವೃದ್ಧ ದಂಪತಿ ಬೊಬ್ಬೆ ಹಾಕಿದ್ದರಿಂದ ಅರ್ಧದಲ್ಲಿ ಬಿಟ್ಟು ಪರಾರಿಯಾಗಿದ್ದರು.
A shocking attempted robbery at the residence of retired Vivekananda College principal A.V. Narayana has led to the arrest of a priest and his wife. The incident occurred around midnight on December 17, when two individuals forcibly entered the house and attempted to loot valuables.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm