ಬ್ರೇಕಿಂಗ್ ನ್ಯೂಸ್
31-12-25 05:48 pm Mangalore Correspondent ಕ್ರೈಂ
ಪುತ್ತೂರು, ಡಿ.31 : ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿರುವ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್ ಸ್ವಾತಿ ರಾವ್ (25) ಎಂಬವರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಡಿ.17ರಂದು ಮನೆಗೆ ನುಗ್ಗಿದ ಆರೋಪಿಗಳು ಎ.ವಿ ನಾರಾಯಣ ಮತ್ತು ಅವರ ಪತ್ನಿಯನ್ನು ಬೆದರಿಸಿ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ, ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು ಹೆದರಿಕೆಯಿಂದ ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿದ್ದಾರೆ. ಮನೆಯಿಂದ ಯಾವುದೇ ಕಳ್ಳತನ ಆಗಿರುವುದಿಲ್ಲ. ಆದರೆ ಯಾರೋ ಇಬ್ಬರು ಸೇರಿ ಕಳವಿಗೆ ಯತ್ನಿಸಿದ್ದಾರೆ ಎಂದು ನಾರಾಯಣ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಆರೋಪಿ ದಂಪತಿಯನ್ನು ಮತ್ತು ಅವರು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದು ಎವಿ ನಾರಾಯಣ ಅವರ ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವ ಬಗ್ಗೆ ಮಾಹಿತಿ ತಿಳಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಹೆಲ್ಮೆಟ್ ಹಾಕಿ ಮನೆಯ ಒಳಗೆ ನುಗ್ಗಿದ್ದು ವೃದ್ಧ ದಂಪತಿ ಬೊಬ್ಬೆ ಹಾಕಿದ್ದರಿಂದ ಅರ್ಧದಲ್ಲಿ ಬಿಟ್ಟು ಪರಾರಿಯಾಗಿದ್ದರು.
A shocking attempted robbery at the residence of retired Vivekananda College principal A.V. Narayana has led to the arrest of a priest and his wife. The incident occurred around midnight on December 17, when two individuals forcibly entered the house and attempted to loot valuables.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm