ಬ್ರೇಕಿಂಗ್ ನ್ಯೂಸ್
02-01-26 12:32 pm HK News Desk ಕ್ರೈಂ
ಕಾರವಾರ, ಜ.2 : ಮುಂಬೈ ಪೊಲೀಸ್ ಇನ್ಸ್ಪೆಕ್ಟರ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿದ ಸೈಬರ್ ವಂಚಕರು, ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ಉಗ್ರಗಾಮಿಗಳ ಸಂಪರ್ಕ ಇರುವುದಾಗಿ ಬೆದರಿಸಿ ಬರೋಬ್ಬರಿ 1.61 ಕೋಟಿ ರೂ. ಪಂಗನಾಮ ಹಾಕಿದ್ದಾರೆ.
ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ, 72 ವರ್ಷದ ಪಾಲ್ಡೆನ್ ವಂಚನೆಗೆ ಒಳಗಾದವರು. ವಾಟ್ಸಪ್ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಮಹಾರಾಷ್ಟ್ರದ ಕೋಲಾಬಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂದು ಪರಿಚಯ ಹೇಳಿದ್ದ. ಬಳಿಕ ಮುಂಬೈನಲ್ಲಿ ಅರೆಸ್ಟ್ ಆಗಿರುವ ಉಗ್ರಗಾಮಿ ಸಂಘಟನೆಯ ನಾಯಕನ ಬಳಿ ಪತ್ತೆಯಾದ ನೂರಾರು ಎಟಿಎಂ ಕಾರ್ಡ್ಗಳಲ್ಲಿ ನಿಮ್ಮ ಹೆಸರಿನ ಕಾರ್ಡ್ ಇದೆ ಎಂದು ಹೆದರಿಸಿದ್ದು, ನಿಮ್ಮ ಖಾತೆಯಿಂದ ಕೋಟಿಗಟ್ಟಲೆ ಹಣ ವರ್ಗಾವಣೆಯಾಗಿದ್ದು, ನಿಮ್ಮ ಮೇಲೆ ಮನಿ ಲಾಂಡ್ರಿಂಗ್ ಪ್ರಕರಣ ದಾಖಲಾಗಿದೆ ಎಂದು ನಂಬಿಸಿದ್ದ.
ಪೊಲೀಸ್ ಡ್ರೆಸ್ನಲ್ಲಿ ವಿಡಿಯೋ ಕರೆ
ವಂಚಕ ವ್ಯಕ್ತಿ ಪೊಲೀಸರ ಸಮವಸ್ತ್ರ ಧರಿಸಿ ವಿಡಿಯೋ ಕರೆ ಮಾಡಿದ್ದು ವೃದ್ಧ ಶಿಕ್ಷಕನನ್ನು ನಂಬಿಕೆ ಬರುವಂತೆ ಮಾಡಿದ್ದ. ಅಲ್ಲದೆ, ನಕಲಿ ಬ್ಯಾಂಕ್ ಸ್ಟೇಟ್ಮೆಂಟ್ ಕಳುಹಿಸಿ, ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲ ಹಣವನ್ನು 'ನ್ಯಾಷನಲ್ ಫಂಡ್'ಗೆ ಜಮಾ ಮಾಡಬೇಕು, ತನಿಖೆ ಮುಗಿದ ಮೇಲೆ ಹಣ ವಾಪಸ್ ನೀಡಲಾಗುವುದು ಎಂದು ನಂಬಿಸಿದ್ದ. ಈ ಬಗ್ಗೆ ಯಾರ ಬಳಿಯೂ ತಿಳಿಸದಂತೆ ಬೆದರಿಸಿದ್ದು, ನೀವು ಡಿಜಿಟಲ್ ಅರೆಸ್ಟ್ ನಲ್ಲಿದ್ದೀರಿ, ಪ್ರತಿ ಎರಡು ಗಂಟೆಗೊಮ್ಮೆ ವಾಟ್ಸಪ್ ಮೂಲಕ ವರದಿ ನೀಡುವಂತೆ ಸೂಚಿಸಿದ್ದ.
ಸಾಲ ಮಾಡಿ ಹಣ ಕೊಟ್ಟ ನಿವೃತ್ತ ಶಿಕ್ಷಕ
ವಂಚಕನ ಮಾತನ್ನು ನಂಬಿದ ಪಾಲ್ಡೆನ್ ತಮ್ಮ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಎಫ್ಡಿ ಹಣ ಹಾಗೂ ಸಂಬಂಧಿಕರಿಂದ ಸಾಲ ಪಡೆದು ಸುಮಾರು 1.61 ಕೋಟಿ ರೂಪಾಯಿಯನ್ನು ಹಂತ ಹಂತವಾಗಿ ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಕೊನೆಗೆ, ಹಾಕಿದ ಹಣ ಹಿಂತಿರುಗಿಸದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು ಕಾರವಾರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a shocking case of cybercrime, fraudsters posing as Mumbai Police officers extorted ₹1.61 crore from a 72-year-old retired teacher from the Tibetan Colony in Mundgod by falsely claiming he was linked to terrorists and under “digital arrest.”
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm