ಬ್ರೇಕಿಂಗ್ ನ್ಯೂಸ್
02-01-26 12:32 pm HK News Desk ಕ್ರೈಂ
ಕಾರವಾರ, ಜ.2 : ಮುಂಬೈ ಪೊಲೀಸ್ ಇನ್ಸ್ಪೆಕ್ಟರ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿದ ಸೈಬರ್ ವಂಚಕರು, ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ಉಗ್ರಗಾಮಿಗಳ ಸಂಪರ್ಕ ಇರುವುದಾಗಿ ಬೆದರಿಸಿ ಬರೋಬ್ಬರಿ 1.61 ಕೋಟಿ ರೂ. ಪಂಗನಾಮ ಹಾಕಿದ್ದಾರೆ.
ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ, 72 ವರ್ಷದ ಪಾಲ್ಡೆನ್ ವಂಚನೆಗೆ ಒಳಗಾದವರು. ವಾಟ್ಸಪ್ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಮಹಾರಾಷ್ಟ್ರದ ಕೋಲಾಬಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂದು ಪರಿಚಯ ಹೇಳಿದ್ದ. ಬಳಿಕ ಮುಂಬೈನಲ್ಲಿ ಅರೆಸ್ಟ್ ಆಗಿರುವ ಉಗ್ರಗಾಮಿ ಸಂಘಟನೆಯ ನಾಯಕನ ಬಳಿ ಪತ್ತೆಯಾದ ನೂರಾರು ಎಟಿಎಂ ಕಾರ್ಡ್ಗಳಲ್ಲಿ ನಿಮ್ಮ ಹೆಸರಿನ ಕಾರ್ಡ್ ಇದೆ ಎಂದು ಹೆದರಿಸಿದ್ದು, ನಿಮ್ಮ ಖಾತೆಯಿಂದ ಕೋಟಿಗಟ್ಟಲೆ ಹಣ ವರ್ಗಾವಣೆಯಾಗಿದ್ದು, ನಿಮ್ಮ ಮೇಲೆ ಮನಿ ಲಾಂಡ್ರಿಂಗ್ ಪ್ರಕರಣ ದಾಖಲಾಗಿದೆ ಎಂದು ನಂಬಿಸಿದ್ದ.
ಪೊಲೀಸ್ ಡ್ರೆಸ್ನಲ್ಲಿ ವಿಡಿಯೋ ಕರೆ
ವಂಚಕ ವ್ಯಕ್ತಿ ಪೊಲೀಸರ ಸಮವಸ್ತ್ರ ಧರಿಸಿ ವಿಡಿಯೋ ಕರೆ ಮಾಡಿದ್ದು ವೃದ್ಧ ಶಿಕ್ಷಕನನ್ನು ನಂಬಿಕೆ ಬರುವಂತೆ ಮಾಡಿದ್ದ. ಅಲ್ಲದೆ, ನಕಲಿ ಬ್ಯಾಂಕ್ ಸ್ಟೇಟ್ಮೆಂಟ್ ಕಳುಹಿಸಿ, ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲ ಹಣವನ್ನು 'ನ್ಯಾಷನಲ್ ಫಂಡ್'ಗೆ ಜಮಾ ಮಾಡಬೇಕು, ತನಿಖೆ ಮುಗಿದ ಮೇಲೆ ಹಣ ವಾಪಸ್ ನೀಡಲಾಗುವುದು ಎಂದು ನಂಬಿಸಿದ್ದ. ಈ ಬಗ್ಗೆ ಯಾರ ಬಳಿಯೂ ತಿಳಿಸದಂತೆ ಬೆದರಿಸಿದ್ದು, ನೀವು ಡಿಜಿಟಲ್ ಅರೆಸ್ಟ್ ನಲ್ಲಿದ್ದೀರಿ, ಪ್ರತಿ ಎರಡು ಗಂಟೆಗೊಮ್ಮೆ ವಾಟ್ಸಪ್ ಮೂಲಕ ವರದಿ ನೀಡುವಂತೆ ಸೂಚಿಸಿದ್ದ.
ಸಾಲ ಮಾಡಿ ಹಣ ಕೊಟ್ಟ ನಿವೃತ್ತ ಶಿಕ್ಷಕ
ವಂಚಕನ ಮಾತನ್ನು ನಂಬಿದ ಪಾಲ್ಡೆನ್ ತಮ್ಮ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಎಫ್ಡಿ ಹಣ ಹಾಗೂ ಸಂಬಂಧಿಕರಿಂದ ಸಾಲ ಪಡೆದು ಸುಮಾರು 1.61 ಕೋಟಿ ರೂಪಾಯಿಯನ್ನು ಹಂತ ಹಂತವಾಗಿ ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಕೊನೆಗೆ, ಹಾಕಿದ ಹಣ ಹಿಂತಿರುಗಿಸದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು ಕಾರವಾರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a shocking case of cybercrime, fraudsters posing as Mumbai Police officers extorted ₹1.61 crore from a 72-year-old retired teacher from the Tibetan Colony in Mundgod by falsely claiming he was linked to terrorists and under “digital arrest.”
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm