ಬ್ರೇಕಿಂಗ್ ನ್ಯೂಸ್
02-01-26 12:32 pm HK News Desk ಕ್ರೈಂ
ಕಾರವಾರ, ಜ.2 : ಮುಂಬೈ ಪೊಲೀಸ್ ಇನ್ಸ್ಪೆಕ್ಟರ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿದ ಸೈಬರ್ ವಂಚಕರು, ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ಉಗ್ರಗಾಮಿಗಳ ಸಂಪರ್ಕ ಇರುವುದಾಗಿ ಬೆದರಿಸಿ ಬರೋಬ್ಬರಿ 1.61 ಕೋಟಿ ರೂ. ಪಂಗನಾಮ ಹಾಕಿದ್ದಾರೆ.
ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ, 72 ವರ್ಷದ ಪಾಲ್ಡೆನ್ ವಂಚನೆಗೆ ಒಳಗಾದವರು. ವಾಟ್ಸಪ್ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಮಹಾರಾಷ್ಟ್ರದ ಕೋಲಾಬಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂದು ಪರಿಚಯ ಹೇಳಿದ್ದ. ಬಳಿಕ ಮುಂಬೈನಲ್ಲಿ ಅರೆಸ್ಟ್ ಆಗಿರುವ ಉಗ್ರಗಾಮಿ ಸಂಘಟನೆಯ ನಾಯಕನ ಬಳಿ ಪತ್ತೆಯಾದ ನೂರಾರು ಎಟಿಎಂ ಕಾರ್ಡ್ಗಳಲ್ಲಿ ನಿಮ್ಮ ಹೆಸರಿನ ಕಾರ್ಡ್ ಇದೆ ಎಂದು ಹೆದರಿಸಿದ್ದು, ನಿಮ್ಮ ಖಾತೆಯಿಂದ ಕೋಟಿಗಟ್ಟಲೆ ಹಣ ವರ್ಗಾವಣೆಯಾಗಿದ್ದು, ನಿಮ್ಮ ಮೇಲೆ ಮನಿ ಲಾಂಡ್ರಿಂಗ್ ಪ್ರಕರಣ ದಾಖಲಾಗಿದೆ ಎಂದು ನಂಬಿಸಿದ್ದ.
ಪೊಲೀಸ್ ಡ್ರೆಸ್ನಲ್ಲಿ ವಿಡಿಯೋ ಕರೆ
ವಂಚಕ ವ್ಯಕ್ತಿ ಪೊಲೀಸರ ಸಮವಸ್ತ್ರ ಧರಿಸಿ ವಿಡಿಯೋ ಕರೆ ಮಾಡಿದ್ದು ವೃದ್ಧ ಶಿಕ್ಷಕನನ್ನು ನಂಬಿಕೆ ಬರುವಂತೆ ಮಾಡಿದ್ದ. ಅಲ್ಲದೆ, ನಕಲಿ ಬ್ಯಾಂಕ್ ಸ್ಟೇಟ್ಮೆಂಟ್ ಕಳುಹಿಸಿ, ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಎಲ್ಲ ಹಣವನ್ನು 'ನ್ಯಾಷನಲ್ ಫಂಡ್'ಗೆ ಜಮಾ ಮಾಡಬೇಕು, ತನಿಖೆ ಮುಗಿದ ಮೇಲೆ ಹಣ ವಾಪಸ್ ನೀಡಲಾಗುವುದು ಎಂದು ನಂಬಿಸಿದ್ದ. ಈ ಬಗ್ಗೆ ಯಾರ ಬಳಿಯೂ ತಿಳಿಸದಂತೆ ಬೆದರಿಸಿದ್ದು, ನೀವು ಡಿಜಿಟಲ್ ಅರೆಸ್ಟ್ ನಲ್ಲಿದ್ದೀರಿ, ಪ್ರತಿ ಎರಡು ಗಂಟೆಗೊಮ್ಮೆ ವಾಟ್ಸಪ್ ಮೂಲಕ ವರದಿ ನೀಡುವಂತೆ ಸೂಚಿಸಿದ್ದ.
ಸಾಲ ಮಾಡಿ ಹಣ ಕೊಟ್ಟ ನಿವೃತ್ತ ಶಿಕ್ಷಕ
ವಂಚಕನ ಮಾತನ್ನು ನಂಬಿದ ಪಾಲ್ಡೆನ್ ತಮ್ಮ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಎಫ್ಡಿ ಹಣ ಹಾಗೂ ಸಂಬಂಧಿಕರಿಂದ ಸಾಲ ಪಡೆದು ಸುಮಾರು 1.61 ಕೋಟಿ ರೂಪಾಯಿಯನ್ನು ಹಂತ ಹಂತವಾಗಿ ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಕೊನೆಗೆ, ಹಾಕಿದ ಹಣ ಹಿಂತಿರುಗಿಸದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು ಕಾರವಾರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a shocking case of cybercrime, fraudsters posing as Mumbai Police officers extorted ₹1.61 crore from a 72-year-old retired teacher from the Tibetan Colony in Mundgod by falsely claiming he was linked to terrorists and under “digital arrest.”
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 11:53 am
Mangalore Correspondent
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm