ಬ್ರೇಕಿಂಗ್ ನ್ಯೂಸ್
03-01-26 03:43 pm Mangalore Correspondent ಕ್ರೈಂ
ಮಂಗಳೂರು, ಜ.3 : ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಬಂಟ್ವಾಳ ತಾಲೂಕಿನ ಪೆರ್ನೆ ಶಾಖೆಯ ಜಂಟಿ ವ್ಯವಸ್ಥಾಪಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಬ್ಯಾಂಕ್ ಶಾಖೆಯಿಂದ 70.86 ಲಕ್ಷ ರೂ. ಲಪಟಾಯಿಸಿದ್ದಲ್ಲದೆ, ಸೇಫ್ ಲಾಕರಿನಿಂದ 15 ಗ್ರಾಮ್ ಚಿನ್ನವನ್ನು ಎಗರಿಸಿ ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
04-09-2023 ರಿಂದ 19-12-2025 ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ವ್ಯವಸ್ಥಾಪಕನಾಗಿದ್ದ ಆಂಧ್ರ ಮೂಲದ ಸುಬ್ರಹ್ಮಣ್ಯಂ (30) ಎಂಬ ವ್ಯಕ್ತಿ ಉಂಡ ಮನೆಗೇ ಭಾರೀ ದ್ರೋಹ ಎಸಗಿ ನಾಪತ್ತೆಯಾಗಿದ್ದಾನೆ. ಈತ ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯ ಜಂಟಿ ವ್ಯವಸ್ಥಾಪಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿಯನ್ನೂ ಹೊಂದಿದ್ದರು.
ಆರೋಪಿ ವ್ಯಕ್ತಿ 06-02-2024 ರಿಂದ 16-12-2025 ರ ವರೆಗೆ ಎಟಿಎಂಗೆ ನಿಗದಿತ ನಗದು ಜಮಾ ಮಾಡದೇ ಕಡಿಮೆ ಹಣ ಜಮಾ ಮಾಡಿ ರೂ.70,86,000/- ಹಣವನ್ನು ದುರುಪಯೋಗ ಪಡಿಸಿದ್ದಾನೆ. 19-12-2025 ರಂದು ಸೇಫ್ ಲಾಕರ್ ಪರಿಶೀಲನೆ ವೇಳೆ ರೂ.55,000/- ಮೌಲ್ಯದ 4.400 ಗ್ರಾಂ ಚಿನ್ನ ವಂಚಿಸಿರುವುದು ಬೆಳಕಿಗೆ ಬಂದಿದೆ. ಹಣದ ದುರುಪಯೋಗ ಮೇಲಧಿಕಾರಿಗಳಿಗೆ ತಿಳಿಯುತ್ತಿದ್ದಂತೆ 17-12-2025 ರಂದು ಯಾರಿಗೂ ತಿಳಿಸದೇ ತೆರಳಿರುತ್ತಾರೆ. ಒಟ್ಟು ವಂಚನೆಯ ಮೌಲ್ಯ ರೂ.71,41,000/- ಆಗಿರುತ್ತದೆ ಎಂದು ಬ್ಯಾಂಕ್ ಆಫ್ ಬರೋಡಾ ಜೆಪ್ಪು ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರಶೇಖರ್ (50) ಡಿ.23ರಂದು ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.
A major fraud has surfaced at the Bank of Baroda’s Perne branch in Bantwal taluk, where Assistant Manager Subrahmanyam (30), originally from Andhra Pradesh, allegedly misappropriated ₹70.86 lakh from the ATM cash loading process and stole 15 grams of gold worth ₹55,000 from the bank’s safe locker.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am