ಬ್ರೇಕಿಂಗ್ ನ್ಯೂಸ್
07-01-26 10:45 pm Bangalore Correspondent ಕ್ರೈಂ
ಬೆಂಗಳೂರು, ಜ 07 : ಪೋಷಕರ ಜತೆಗೆ ನೆಲಸಿದ್ದ ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವ ಘಟನೆ ನಾಗರದ ವೈಟ್ಫೀಲ್ಡ್ ಬಳಿ ನಡೆದಿದೆ.
ಪಶ್ಚಿಮ ಬಂಗಾಳದ ಇಂಜಮುಲ್ ಶೇಖ್ ಅವರ ಪುತ್ರಿ ಶಹನಾಜ್ ಖಾತುನ್ ಕೊಲೆಯಾದವಳು. ಆರೋಪಿಯ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೆಲವು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಇಂಜಮುಲ್ ಶೇಖ್ ಕುಟುಂಬವು ನಲ್ಲೂರುಹಳ್ಳಿ ಸುತ್ತಮುತ್ತ ಕೂಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಮನೆಯ ಎದುರು ಬಾಲಕಿ ಆಟವಾಡುತ್ತಿದ್ದಳು. ಆಗ ಅಪಹರಣ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು. ಠಾಣೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾಗ ದೇವಸ್ಥಾನದ ಪಕ್ಕದ ಕಾಲುವೆಯಲ್ಲಿ ಅದೇ ದಿನ ರಾತ್ರಿ ಮೃತದೇಹ ಪತ್ತೆಯಾಗಿದೆ.
ಬಾಲಕಿಯ ಪೋಷಕರು ವಾಸವಿದ್ದ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಯ ಪತ್ತೆಗೆ ಮೂರು ವಿಷೇಶ ತಂಡ ರಚಿಸಲಾಗಿದೆ. ಮೃತದೇಹದಲ್ಲಿ ಬೇರೆ ಯಾವುದೇ ಗಾಯಗಳು ಕಂಡುಬಂದಿಲ್ಲ. ಪ್ಲಾಸ್ಟಿಕ್ ಹಗ್ಗ ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದರು.
ಪಕ್ಕದ ಮನೆಯ ನಿವಾಸಿಯ ಜತೆಗೆ ಬಾಲಕಿಯ ತಾಯಿ ಇತ್ತೀಚೆಗೆ ಜಗಳವಾಡಿದ್ದರು. ಅದೇ ಸಿಟ್ಟಿನಿಂದ ಆ ವ್ಯಕ್ತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದರು
A heartbreaking incident has been reported near Whitefield, where a 6-year-old girl was kidnapped and murdered, allegedly as an act of revenge following a quarrel involving her mother. The accused stuffed the child’s body in a plastic bag and dumped it in a drain.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm