ಬ್ರೇಕಿಂಗ್ ನ್ಯೂಸ್
13-01-26 03:37 pm HK News Desk ಕ್ರೈಂ
ನವದೆಹಲಿ, ಜ.13 : 'ಡಿಜಿಟಲ್ ಅರೆಸ್ಟ್' ನೆಪದಲ್ಲಿ ವೃದ್ಧ ವೈದ್ಯ ದಂಪತಿಯನ್ನು ವಂಚಿಸಿದ ಸೈಬರ್ ವಂಚಕರು ಬರೋಬ್ಬರಿ 14 ಕೋಟಿ ರೂಪಾಯಿ ದೋಚಿದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯಲ್ಲಿ ವಾಸವಿರುವ ದಂಪತಿಗೆ ಪೊಲೀಸ್ ಅಧಿಕಾರಿಗಳು ಎಂದು ಹೇಳಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ಹೇಳಿ ಹಣ ಕಿತ್ತುಕೊಂಡಿದ್ದಾರೆ.
ದಂಪತಿಗೆ ನೀವು ಅಕ್ರಮ ಪ್ರಕರಣಗಳಲ್ಲಿ ಭಾಗಿಯಾಗಿದ್ದೀರಿ, ನಿಮ್ಮ ಮೊಬೈಲ್ ನಿಂದ ಅಶ್ಲೀಲ ವಿಡಿಯೋ ರವಾನೆಯಾಗಿದೆ ಎಂದು ಹೇಳಿ, ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇಲ್ಲದಿದ್ದರೆ ಮೊಬೈಲ್ ನಂಬರ್ ಕಟ್ ಆಗುತ್ತದೆ ಎಂದೂ ಹೇಳಿದ್ದರು. ವಿಡಿಯೊ ಕಾಲ್ ಮೂಲಕ ದಂಪತಿಗೆ ಕಿರುಕುಳ ನೀಡಿದ್ದಾರೆ. ಬಳಿಕ ದಂಪತಿಗೆ ವಿವಿಧ ಬ್ಯಾಂಕ್ ಖಾತೆಗಳನ್ನು ಕಳುಹಿಸಿ, ಅವರಿಂದ ಹಂತ ಹಂತವಾಗಿ 14 ಕೋಟಿ ರೂ. ವರ್ಗಾಯಿಸಿಕೊಂಡಿದ್ದಾರೆ.
ವೈದ್ಯ ದಂಪತಿ ಅಮೆರಿಕದಿಂದ ಹಿಂದಿರುಗಿದ್ದು ದೆಹಲಿಯ ಕೈಲಾಶ್ ನಲ್ಲಿ ವಾಸಿಸುತ್ತಿದ್ದರು. ಇವರ ಮಕ್ಕಳು ವಿದೇಶದಲ್ಲೇ ನೆಲೆಸಿದ್ದಾರೆ. ಡಿಸೆಂಬರ್ 24ರಿಂದ ಜನವರಿ 9ರ ವರೆಗೆ ನಿರಂತರ ವಿಡಿಯೊ ಕರೆ ಮಾಡಿದ್ದು ಮುಂಬೈನಲ್ಲಿ ಕೇಸು ದಾಖಲಾಗಿದೆ ಎಂದು ಹೇಳಿ ವೃದ್ಧ ದಂಪತಿಗೆ ಬೆದರಿಕೆ ಹಾಕಿದ್ದರು. ನಿಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸಲಿಕ್ಕಿದೆ ಎಂದು ಹೇಳಿ ಆರೋಪಿಗಳನ್ನ ಯಾಮಾರಿಸಿ ಮಾಹಿತಿ ಪಡೆದಿದ್ದರು.
ಪದೇ ಪದೇ ಕರೆ ಮಾಡಿ ಬ್ಯಾಂಕ್ ಖಾತೆಗಳಲ್ಲಿರುವ ಹಣವನ್ನು ಡಿಪಾಸಿಟ್ ಮಾಡಲು ಹೇಳುತ್ತಿದ್ದರು. ಮುಂಬೈನ ಕೊಲಾಬ ಠಾಣೆಯ ಅಧಿಕಾರಿ ಎಂದು ಹೇಳಿ ಪೊಲೀಸ್ ಬಟ್ಟೆ ಧರಿಸಿದ್ದ ವಿಕ್ರಮ್ ಸಿಂಗ್ ಎಂಬಾತ ನಿಮ್ಮ ವಿರುದ್ಧ ಮನಿ ಲಾಂಡರಿಂಗ್ ಕೇಸು ದಾಖಲಾಗಿದೆ ಎಂದು ಹೇಳಿದ್ದ. ನಾವು ಹೇಳಿದಂತೆ ಕೇಳಬೇಕೆಂದು ಹೇಳಿ ಬ್ಯಾಂಕ್ ಖಾತೆಯ ವಿವರ ಪಡೆದಿದ್ದರು ಎಂದು ದಂಪತಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಜನವರಿ 9ರ ವೇಳೆಗೆ ದಂಪತಿ ತಮಗಾದ ವಂಚನೆಯನ್ನು ಅರಿತು ಪೊಲೀಸರನ್ನು ಸಂಪರ್ಕಸಿ, ದೂರು ದಾಖಲಿಸಿದ್ದಾರೆ.
Cyber criminals posing as police officials duped an elderly doctor couple in Delhi of nearly ₹14 crore by threatening them with a so-called “digital arrest.” The fraudsters accused the couple of involvement in illegal activities and money laundering, harassed them through continuous video calls, and coerced them into transferring money to multiple bank accounts over several days.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm