ಬ್ರೇಕಿಂಗ್ ನ್ಯೂಸ್
20-01-26 07:51 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ 60 ಲಕ್ಷ ವಂಚನೆ ಮಾಡಿದ್ದಾರೆಂದು ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಕಾಫಿ ತೋಟದ ಮಾಲೀಕ ದೀಪಕ್ ಎಂಬವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ನಟ ಕಿಚ್ಚ ಸುದೀಪ್ ಹಾಗೂ ಅವರ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ದೂರು ನೀಡಿದ್ದಾರೆ. ದೀಪಕ್ ಅವರಿಗೆ ಸೇರಿದ್ದ ಮನೆ ಹಾಗೂ ಕಾಫಿ ತೋಟದಲ್ಲಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅಗ್ರಿಮೆಂಟ್ ಪ್ರಕಾರ ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
'ವಾರಸ್ಥಾರ' ಎಂಬ ಧಾರಾವಾಹಿಗಾಗಿ ಮನೆ ಹಾಗೂ ಕಾಫಿ ತೋಟದಲ್ಲಿ ಚಿತ್ರೀಕರಣ ಮಾಡಲು ಎರಡು ವರ್ಷಗಳ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಚಿತ್ರೀಕರಣ ಆರಂಭಿಸಿದ ಕೆಲವೇ ದಿನಗಳಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿದ್ದಾರೆ. ಚಿತ್ರೀಕರಣ ಉದ್ದೇಶಕ್ಕಾಗಿ ಕಾಫಿ ತೋಟ, ಮರಗಳನ್ನು ನಾಶ ಮಾಡಿದ್ದಾರೆ. ಆದರೆ ಅಗ್ರಿಮೆಂಟ್ ನಂತೆ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ 95 ಲಕ್ಷ ಪರಿಹಾರ ನೀಡುವಂತೆ ಕಿಚ್ಚ ಸುದೀಪ್ ಹಾಗೂ ಚಂದ್ರಚೂಡ್ ವಿರುದ್ಧ ಕೋರ್ಟ್ ಕೇಸ್ ಹಾಕಿದ್ದರು. ಬಳಿಕ ಕೇಸ್ ವಾಪಸ್ ಪಡೆಯಿರಿ 60 ಲಕ್ಷ ಹಣ ನೀಡುವುದಾಗಿ ನಟ ಕಿಚ್ಚ ಸುದೀಪ್ ಭರವಸೆ ನೀಡಿದ್ದರು. ಮಾತುಕತೆ ಬಳಿಕ ಪ್ರಕರಣ ವಾಪಸ್ ಪಡೆದಿದ್ದರೂ ಹಣ ನೀಡಿರಲಿಲ್ಲ.
ಪ್ರಕರಣ ಹಿಂಪಡೆಯುವ ಮುನ್ನ ನಟ ಸುದೀಪ್ ಅವರ ಮ್ಯಾನೇಜರ್ ಚಂದ್ರಚೂಡ್ 10 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಆನಂತರ ಬಾಕಿ ಹಣ ನೀಡದೇ ವಂಚಿಸಿದ್ದಾರೆ ಎಂದು ದೀಪಕ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ದೂರು ನೀಡಿದ್ದಾರೆ.
Actor Kiccha Sudeep and his manager Chandrachood have been accused of cheating to the tune of ₹60 lakh by two coffee estate owners, who have filed a complaint with the Bengaluru Police Commissioner.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm