ಬ್ರೇಕಿಂಗ್ ನ್ಯೂಸ್
22-01-26 02:40 pm Bangalore Correspondent ಕ್ರೈಂ
ಬೆಂಗಳೂರು, ಜ.22 : ರಾಜ್ಯದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿಗೈದ ಆರೋಪದಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಒಂದು ಕೋಟಿ ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ.
ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.
ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದಿದ್ದು, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೆದರಿಕೆ ಮುಂದುವರಿಸಿದ್ದಳು. ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈಗ ಬ್ಲ್ಯಾಕ್ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ.
Bengaluru CCB police have arrested a young woman from Chikkamagaluru for allegedly blackmailing a Swami and extorting money from him. The accused reportedly collected ₹4.5 lakh and later demanded ₹1 crore, threatening defamation if the money was not paid.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm