ಬ್ರೇಕಿಂಗ್ ನ್ಯೂಸ್
22-01-26 02:40 pm Bangalore Correspondent ಕ್ರೈಂ
ಬೆಂಗಳೂರು, ಜ.22 : ರಾಜ್ಯದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿಗೈದ ಆರೋಪದಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಒಂದು ಕೋಟಿ ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ.
ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.
ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದಿದ್ದು, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೆದರಿಕೆ ಮುಂದುವರಿಸಿದ್ದಳು. ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈಗ ಬ್ಲ್ಯಾಕ್ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ.
Bengaluru CCB police have arrested a young woman from Chikkamagaluru for allegedly blackmailing a Swami and extorting money from him. The accused reportedly collected ₹4.5 lakh and later demanded ₹1 crore, threatening defamation if the money was not paid.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm