ಬ್ರೇಕಿಂಗ್ ನ್ಯೂಸ್
22-01-26 02:40 pm Bangalore Correspondent ಕ್ರೈಂ
ಬೆಂಗಳೂರು, ಜ.22 : ರಾಜ್ಯದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿಗೈದ ಆರೋಪದಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಒಂದು ಕೋಟಿ ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ.
ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.
ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದಿದ್ದು, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೆದರಿಕೆ ಮುಂದುವರಿಸಿದ್ದಳು. ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈಗ ಬ್ಲ್ಯಾಕ್ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ.
Bengaluru CCB police have arrested a young woman from Chikkamagaluru for allegedly blackmailing a Swami and extorting money from him. The accused reportedly collected ₹4.5 lakh and later demanded ₹1 crore, threatening defamation if the money was not paid.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm