ಬ್ರೇಕಿಂಗ್ ನ್ಯೂಸ್
23-01-26 09:36 pm Mangaluru Staffer ಕ್ರೈಂ
ಮಂಗಳೂರು, ಜ.23: ಬೈಕ್ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಂಗಳೂರಿನ ಕುಳೂರು ನಿವಾಸಿ ಮೊಯಿದ್ದೀನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಮರೋಡಿ ಗ್ರಾಮದ ನಿವಾಸಿ ದೇವಿಪ್ರಸಾದ್ ಎಂಬವರ ಬೈಕನ್ನು ಕದ್ದು ಪರಾರಿಯಾಗುತ್ತಿದ್ದ ಸಂದರ್ಭ ಆರೋಪಿಗಳನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದಾರೆ. ಈ ವೇಳೆ, ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದರೆಂದು ಸ್ಥಳೀಯರು ಸೇರಿ ಇಬ್ಬರನ್ನೂ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ.
ವಿಷಯ ತಿಳಿದು ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಬೈಕ್ ಕಳವು ಯತ್ನ ವಿಚಾರದಲ್ಲಿ ಅಬ್ದುಲ್ ಸಮದ್ ಮತ್ತು ಮೊಯಿದ್ದೀನ್ ವಿರುದ್ದ BNS ಕಲಂ 303(2), 307 ಅಡಿ ಪ್ರಕರಣ ದಾಖಲಾಗಿದೆ. ಇದಲ್ಲದೆ, ಇವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಹಲ್ಲೆ ನಡೆಸಿದ ಆರೋಪದಲ್ಲಿ ಸ್ಥಳೀಯರಾದ ಬಾಚು, ನಿಶಿತ್, ನರೇಶ್ ಅಂಚನ್, ರತ್ನಾಕರ, ಸ್ವಸ್ತಿಕ್, ದೇವಿಪ್ರಸಾದ್, ಸುಧೀರ್, ಚಂದಪ್ಪ ಎಂಬವರ ವಿರುದ್ದ BNS ಕಾಯಿದೆ ಕಲಂ 189(2), 191(2), 191(3), 352, 115(2), 118(1), 351(2) ,190 ಅಡಿ ಪ್ರಕರಣ ದಾಖಲಿಸಲಾಗಿದೆ.
In a disturbing incident of mob violence, two men accused of attempting to steal a motorcycle were tied to a tree and assaulted by locals at Palaragoli in Marodi village of Belthangady taluk. The incident occurred late on the night of January 20 and came to light later.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm