ಬ್ರೇಕಿಂಗ್ ನ್ಯೂಸ್
23-01-26 09:36 pm Mangaluru Staffer ಕ್ರೈಂ
ಮಂಗಳೂರು, ಜ.23: ಬೈಕ್ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಂಗಳೂರಿನ ಕುಳೂರು ನಿವಾಸಿ ಮೊಯಿದ್ದೀನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಮರೋಡಿ ಗ್ರಾಮದ ನಿವಾಸಿ ದೇವಿಪ್ರಸಾದ್ ಎಂಬವರ ಬೈಕನ್ನು ಕದ್ದು ಪರಾರಿಯಾಗುತ್ತಿದ್ದ ಸಂದರ್ಭ ಆರೋಪಿಗಳನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದಾರೆ. ಈ ವೇಳೆ, ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದರೆಂದು ಸ್ಥಳೀಯರು ಸೇರಿ ಇಬ್ಬರನ್ನೂ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ.
ವಿಷಯ ತಿಳಿದು ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಬೈಕ್ ಕಳವು ಯತ್ನ ವಿಚಾರದಲ್ಲಿ ಅಬ್ದುಲ್ ಸಮದ್ ಮತ್ತು ಮೊಯಿದ್ದೀನ್ ವಿರುದ್ದ BNS ಕಲಂ 303(2), 307 ಅಡಿ ಪ್ರಕರಣ ದಾಖಲಾಗಿದೆ. ಇದಲ್ಲದೆ, ಇವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಹಲ್ಲೆ ನಡೆಸಿದ ಆರೋಪದಲ್ಲಿ ಸ್ಥಳೀಯರಾದ ಬಾಚು, ನಿಶಿತ್, ನರೇಶ್ ಅಂಚನ್, ರತ್ನಾಕರ, ಸ್ವಸ್ತಿಕ್, ದೇವಿಪ್ರಸಾದ್, ಸುಧೀರ್, ಚಂದಪ್ಪ ಎಂಬವರ ವಿರುದ್ದ BNS ಕಾಯಿದೆ ಕಲಂ 189(2), 191(2), 191(3), 352, 115(2), 118(1), 351(2) ,190 ಅಡಿ ಪ್ರಕರಣ ದಾಖಲಿಸಲಾಗಿದೆ.
In a disturbing incident of mob violence, two men accused of attempting to steal a motorcycle were tied to a tree and assaulted by locals at Palaragoli in Marodi village of Belthangady taluk. The incident occurred late on the night of January 20 and came to light later.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm