ಬ್ರೇಕಿಂಗ್ ನ್ಯೂಸ್
27-01-26 12:22 pm HK News Desk ಕ್ರೈಂ
ಮಂಗಳೂರು, ಜ.27: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೌರಾಯುಕ್ತೆಗೆ ಅವಾಚ್ಯ ನಿಂದಿಸಿ ಲಾಕ್ ಆಗಿರುವ ಕಾಂಗ್ರೆಸ್ ಮುಖಂಡ ರಾಜೀವ ಗೌಡನಿಗೆ ಮಂಗಳೂರಿನ ಫಾರ್ಮ್ ಹೌಸ್ ನಲ್ಲಿ ಆಶ್ರಯ ನೀಡಲಾಗಿತ್ತು ಎನ್ನುವ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಫಾರ್ಮ್ ಹೌಸ್ ಮಾಲೀಕ ಮೈಕಲ್ ಜೋಸೆಫ್ ರೇಗೊ ಅವರನ್ನು ಬಂಧಿಸಿದ್ದಾರೆ.
ರಾಜೀವ ಗೌಡ ತನ್ನ ಸಂಬಂಧಿಕರ ಕಾರಿನಲ್ಲಿ ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿದ್ದು ಅಲ್ಲಿ ಕಾರು ಬಿಟ್ಟು ಹೋಗಿದ್ದ ಎನ್ನುವ ಮಾಹಿತಿ ಮೂರು ದಿನಗಳ ಹಿಂದೆಯೇ ಪೊಲೀಸರಿಗೆ ಲಭಿಸಿತ್ತು. ರೈಲಿನಲ್ಲಿ ಕೇರಳಕ್ಕೆ ತೆರಳಿರುವ ಶಂಕೆಯಲ್ಲಿ ಕರ್ನಾಟಕ ಪೊಲೀಸರು ಕೇರಳಕ್ಕೆ ತೆರಳಿದ್ದರು. ಸೋಮವಾರ ಬೆಳಗ್ಗೆ ತಿರುವನಂತಪುರದಿಂದ ತಮಿಳುನಾಡು ಕಡೆಗೆ ಎಸ್ಕೇಪ್ ಆಗುವಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಮಂಗಳೂರಿನಲ್ಲಿ ಕೆಲವು ದಿನ ಉಳಿದುಕೊಂಡಿದ್ದು ಆಶ್ರಯ ನೀಡಿದ್ಯಾರು ಎಂಬಿತ್ಯಾದಿ ವಿಚಾರ ತಿಳಿಯುತ್ತಲೇ ಪೊಲೀಸರು ಆಶ್ರಯ ನೀಡಿದವರಿಗೂ ಬೇಡಿ ಹಾಕಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ರಾಜಕೀಯ ಸಂಪರ್ಕ ಹೊಂದಿರುವ ಮೈಕಲ್ ಜೋಸೆಫ್ ರೇಗೊ ಪಚ್ಚನಾಡಿಯಲ್ಲಿ ಫಾರ್ಮ್ ಹೌಸ್ ಮಾಡಿಕೊಂಡಿದ್ದಾರೆ. ಅಲ್ಲದೆ, ಮಂಗಳೂರಿನ ಫಳ್ನೀರ್ ನಲ್ಲಿ ಫರ್ನಿಚರ್ ಶೋರೂಮ್ ಹೊಂದಿದ್ದಾರೆ ಎನ್ನಲಾಗಿದೆ. ಸದ್ಯ ಚಿಕ್ಕಬಳ್ಳಾಪುರ ಪೊಲೀಸರು ಅವರನ್ನು ವಿಚಾರಣೆಗಾಗಿ ಕರೆದೊಯ್ದಿದ್ದಾರೆ.
ಫ್ಲೆಕ್ಸ್ ಕಿತ್ತು ಹಾಕಿದ ವಿಚಾರದಲ್ಲಿ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡರಿಗೆ ಕರೆ ಮಾಡಿದ್ದ ರಾಜೀವ ಗೌಡ ಅವಾಚ್ಯವಾಗಿ ನಿಂದಿಸಿದ್ದ. ಈ ಬಗ್ಗೆ ಪೌರಾಯುಕ್ತೆ ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
In a major development in the case involving Congress leader Rajeev Gowda, who is accused of verbally abusing a municipal commissioner in Chikkaballapur district, police have arrested a Mangaluru-based man for allegedly providing him shelter at a farmhouse. Michael Rego is said to have political connections with the Congress party in Mangaluru. He owns a farmhouse in Pachchanady and is also the owner of “JAKEA – The Eco Design Store” at Bondel, besides running a furniture showroom at Falnir in the city. He has now been taken into custody by the Chikkaballapur police for further questioning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm