ಬ್ರೇಕಿಂಗ್ ನ್ಯೂಸ್
27-01-26 05:15 pm Mangalore Correspondent ಕ್ರೈಂ
ಮಂಗಳೂರು, ಜ.27 : ಆರ್ ಟಿಐ ಏಕ್ಟಿವಿಸ್ಟ್ ಫಾರ್ ಜಸ್ಟೀಸ್ ಎಂಬ ಸಂಸ್ಥೆಯು ಸಲ್ಲಿಸಿದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಮೂಡುಬಿದ್ರೆಯ ಜೆಎಂಎಫ್ ನ್ಯಾಯಾಲಯವು ಕಿನ್ನಿಗೋಳಿಯ ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆ ಮತ್ತು ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡಿದೆ.
ಮುಲ್ಕಿ ಕಿನ್ನಿಗೋಳಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕೆನರಾ ಲೈಟಿಂಗ್ಸ್ ಇಂಡಸ್ಟ್ರೀಸ್ ಸಂಸ್ಥೆ ಮತ್ತು ಅದರ ನಿರ್ದೇಶಕರಾದ ನೇಹಾ ಖರೆ, ಅರುಣ್ ಕುಮಾರ್ ಎ.ಎಸ್, ಗೌರವ್ ಖರೆ, ಅಜೀತ್ ಖರೆ, ಕಿರಣ್ ಖರೆ ಎಂಬವರು ಕೊಲ್ಕತಾ ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಒಳಪಟ್ಟ ಮಂದಿರಗಳಿಗೆ ಸೌಂಡ್ಸ್, ಲೈಟಿಂಗ್ ಅಳವಡಿಸುವುದಕ್ಕೆ ಟೆಂಡರ್ ಪಡೆದಿದ್ದರು. 2018-19ರಲ್ಲಿ ಈ ಟೆಂಡರ್ ಪಡೆದಿದ್ದು, ಇದಕ್ಕಾಗಿ ಗುಲ್ಬರ್ಗಾ ವಿಭಾಗೀಯ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಹೆಸರಲ್ಲಿ ಲೈಟಿಂಗ್ ಮತ್ತು ಉಪಕರಣಗಳನ್ನು ಸರ್ಕಾರದಿಂದ ಪೂರೈಸಿದ್ದಾಗಿ ಪೋರ್ಜರಿ ದಾಖಲೆಗಳನ್ನು ನೀಡಿದ್ದರು. ಈ ಬಗ್ಗೆ ಆರ್ಟಿಐ ಏಕ್ಟಿವಿಸ್ಟ್ ಸಂಸ್ಥೆಯು ಮಾಹಿತಿಗಳನ್ನು ಸಂಗ್ರಹಿಸಿ ಮುಲ್ಕಿ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿ ಸ್ಥಾನದಲ್ಲಿ ಹಿರಿಯ ಅಧಿಕಾರಿಯೊಬ್ಬರನ್ನು ಕಾಣಿಸಿದ್ದರಿಂದ ದೂರು ಪಡೆದಿರಲಿಲ್ಲ.

ಹೀಗಾಗಿ ಮೂಡುಬಿದ್ರೆ ಜೆಎಂಎಫ್ ಕೋರ್ಟಿನಲ್ಲಿ ಖಾಸಗಿ ದೂರು ದಾಖಲಿಸಿದ್ದು, ಪೂರಕ ದಾಖಲೆಗಳನ್ನು ಸಲ್ಲಿಸಿದ್ದಾರೆ. ಇದರಂತೆ, ವಾದ ಆಲಿಸಿದ ಕೋರ್ಟ್ ಮೇಲ್ನೋಟಕ್ಕೆ ತಪ್ಪುಗಳು ಕಂಡುಬಂದಿರುವುದಾಗಿ ಹೇಳಿದ್ದು, ಕ್ರಿಮಿನಲ್ ತನಿಖೆಗೆ ಒಪ್ಪಿಗೆ ನೀಡಿದೆ. ಆದರೆ ಐಎಎಸ್ ಅಧಿಕಾರಿಯ ವಿರುದ್ಧ ತೋರಿಸಲಾದ ಸಾಕ್ಷ್ಯ ಸಾಲದು ಎಂಬ ಕಾರಣಕ್ಕಾಗಿ ಅವರ ಮೇಲಿನ ತನಿಖೆಗೆ ಒಪ್ಪಿಗೆ ನೀಡಿಲ್ಲ.
ಸುಳ್ಳು ದಾಖಲೆಗಳನ್ನು ತೋರಿಸಿ ಕೋಲ್ಕತ್ತಾ ಮಹಾನಗರ ಪಾಲಿಕೆಯ ಪ್ರಾಧಿಕಾರದಿಂದ 3.96 ಕೋಟಿ ಮೊತ್ತದ ಟೆಂಡರ್ ಪಡೆದಿದ್ದಾಗಿ ಆರ್ಟಿಐ ಏಕ್ಟಿವಿಸ್ಟ್ ಸಂಸ್ಥೆ ಆರೋಪಿಸಿದೆ. ಪ್ರಕರಣದಲ್ಲಿ ಕೆನರಾ ಇಂಡಸ್ಟ್ರೀಸ್ ಸಂಸ್ಥೆಯ ನಿರ್ದೇಶಕರಿಗೆ ಸಮನ್ಸ್ ನೀಡಲು ಕೋರ್ಟ್ ಆದೇಶಿಸಿದ್ದು, ಮುಂದಿನ ವಿಚಾರಣೆಯನ್ನು 2026ರ ಮಾರ್ಚ್ 10ರಂದು ನಡೆಸಲಿದೆ. ದೂರುದಾರರ ಪರವಾಗಿ ನವೀನ್ ಜಿ. ಮತ್ತು ಕುಮಾರ್ ಸತ್ಯನಾರಾಯಣ ವಾದಿಸಿದ್ದರು.
The Moodbidri JMFC court has permitted a criminal investigation against Canara Lighting Industries and its directors over allegations of securing a ₹3.96 crore Kolkata Municipal Corporation tender using forged documents in the name of an IAS officer. However, the court declined approval to probe the IAS officer citing insufficient evidence and issued summons to the company’s directors, with the next hearing set for March 10, 2026.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 08:27 pm
HK News Staffer
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm