ಬ್ರೇಕಿಂಗ್ ನ್ಯೂಸ್
27-01-26 10:18 pm Bangalore Correspondent ಕ್ರೈಂ
ಬೆಂಗಳೂರು, ಜ.27 : ಚಿನ್ನದ ರೇಟು ಹೆಚ್ಚುತ್ತಿದ್ದಂತೆ ಚಿನ್ನದ ಅಂಗಡಿಗಳಿಗೆ ನುಗ್ಗಿ ದರೋಡೆ ನಡೆಸುವ ಕೃತ್ಯಗಳು ಹೆಚ್ಚುತ್ತಿವೆ. ನಿನ್ನೆ ವಿಜಯಪುರದಲ್ಲಿ ಗನ್ ತೋರಿಸಿ ಜುವೆಲ್ಲರಿ ದರೋಡೆ ನಡೆಸಲಾಗಿತ್ತು. ಇಂದು ಬೆಂಗಳೂರಿನಿಂದ ನೆಲಮಂಗಲದಲ್ಲಿ ಮೂವರು ಆಗಂತುಕರು ಹಾಡಹಗಲೇ ಜುವೆಲ್ಲರಿ ನುಗ್ಗಿ ಗನ್ ತೋರಿಸಿ ಬಂಗಾರದ ಒಡವೆಗಳನ್ನು ದೋಚಿಕೊಂಡು ಹೋಗಿದ್ದಾರೆ.
ನೆಲಮಂಗಲ ಬಳಿಯ ದಾಸನಪುರದ ರಾಮದೇವ್ ಜ್ಯುವೆಲ್ಲರಿ ಅಂಗಡಿಗೆ ಸಂಜೆ 5.30ರ ವೇಳೆಗೆ ಆಗಂತುಕರು ನುಗ್ಗಿದ್ದು ಅಂಗಡಿ ಮಾಲೀಕನಿಗೆ ಗನ್ ತೋರಿಸಿ ದರೋಡೆ ಮಾಡಿದ್ದಾರೆ. ಪ್ಲಾಸ್ಟಿಕ್ ರೀತಿಯ ಗನ್ ತೋರಿಸಿ ಬೆದರಿಸಿದ ದುಷ್ಕರ್ಮಿಗಳು 28 ಗ್ರಾಂ ಚಿನ್ನದ ಸರ, ಐವತ್ತು ಸಾವಿರ ನಗದು ಹಣವನ್ನು ಕಸಿದು ಪರಾರಿಯಾಗಿದ್ದಾರೆ. ಜ್ಯುವೆಲ್ಲರಿ ಶಾಪ್ ಮಾಲೀಕ ಪ್ರತಿರೋಧ ತೋರುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಮೂವರು ಚಿನ್ನದ ಒಡವೆಗಳನ್ನು ಕದ್ದೊಯ್ಯುವುದು, ಮಾಲೀಕನನಿಗೆ ಬೆದರಿಕೆ ಹಾಕುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇವರು ರಾಜಸ್ಥಾನಿ ಭಾಷೆ ಮಾತನಾಡುತ್ತಿದ್ದರು ಎಂಬ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ. ಸಾಕಷ್ಟು ಜನರು ಇರುವಾಗಲೇ ಕಳ್ಳರು ಒಳಗಡೆ ಬಂದು ಗನ್ ತೋರಿಸಿ ರಾಜಾರೋಷವಾಗಿ ಪರಾರಿಯಾಗಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಬೆಳಗಾವಿ ಗಡಿಯಲ್ಲಿ 400 ಕೋಟಿ ದರೋಡೆ ಆಗಿರುವುದು ಬೆಳಕಿಗೆ ಬಂದಿತ್ತು. ಮರುದಿನವೇ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಗನ್ ತೋರಿಸಿ ದರೋಡೆ ಮಾಡಲಾಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲು ದರೋಡೆಯಾಗಿದ್ದು ಮಾದನಾಯಕಹಳ್ಳಿ ಠಾಣೆಯಲ್ಲಿ ಜುವೆಲ್ಲರಿ ಮಾಲೀಕ ದೂರು ದಾಖಲಿಸಿದ್ದಾರೆ.
In a daylight robbery, three miscreants barged into a jewellery shop in Dasanapura near Nelamangala and escaped after looting gold ornaments and cash. The accused threatened the shop owner with a gun and fled with 28 grams of gold and ₹50,000. The entire incident was caught on CCTV, and police have registered a case at Madanayakanahalli police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm