ಬ್ರೇಕಿಂಗ್ ನ್ಯೂಸ್
27-01-26 10:18 pm Bangalore Correspondent ಕ್ರೈಂ
ಬೆಂಗಳೂರು, ಜ.27 : ಚಿನ್ನದ ರೇಟು ಹೆಚ್ಚುತ್ತಿದ್ದಂತೆ ಚಿನ್ನದ ಅಂಗಡಿಗಳಿಗೆ ನುಗ್ಗಿ ದರೋಡೆ ನಡೆಸುವ ಕೃತ್ಯಗಳು ಹೆಚ್ಚುತ್ತಿವೆ. ನಿನ್ನೆ ವಿಜಯಪುರದಲ್ಲಿ ಗನ್ ತೋರಿಸಿ ಜುವೆಲ್ಲರಿ ದರೋಡೆ ನಡೆಸಲಾಗಿತ್ತು. ಇಂದು ಬೆಂಗಳೂರಿನಿಂದ ನೆಲಮಂಗಲದಲ್ಲಿ ಮೂವರು ಆಗಂತುಕರು ಹಾಡಹಗಲೇ ಜುವೆಲ್ಲರಿ ನುಗ್ಗಿ ಗನ್ ತೋರಿಸಿ ಬಂಗಾರದ ಒಡವೆಗಳನ್ನು ದೋಚಿಕೊಂಡು ಹೋಗಿದ್ದಾರೆ.
ನೆಲಮಂಗಲ ಬಳಿಯ ದಾಸನಪುರದ ರಾಮದೇವ್ ಜ್ಯುವೆಲ್ಲರಿ ಅಂಗಡಿಗೆ ಸಂಜೆ 5.30ರ ವೇಳೆಗೆ ಆಗಂತುಕರು ನುಗ್ಗಿದ್ದು ಅಂಗಡಿ ಮಾಲೀಕನಿಗೆ ಗನ್ ತೋರಿಸಿ ದರೋಡೆ ಮಾಡಿದ್ದಾರೆ. ಪ್ಲಾಸ್ಟಿಕ್ ರೀತಿಯ ಗನ್ ತೋರಿಸಿ ಬೆದರಿಸಿದ ದುಷ್ಕರ್ಮಿಗಳು 28 ಗ್ರಾಂ ಚಿನ್ನದ ಸರ, ಐವತ್ತು ಸಾವಿರ ನಗದು ಹಣವನ್ನು ಕಸಿದು ಪರಾರಿಯಾಗಿದ್ದಾರೆ. ಜ್ಯುವೆಲ್ಲರಿ ಶಾಪ್ ಮಾಲೀಕ ಪ್ರತಿರೋಧ ತೋರುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಮೂವರು ಚಿನ್ನದ ಒಡವೆಗಳನ್ನು ಕದ್ದೊಯ್ಯುವುದು, ಮಾಲೀಕನನಿಗೆ ಬೆದರಿಕೆ ಹಾಕುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇವರು ರಾಜಸ್ಥಾನಿ ಭಾಷೆ ಮಾತನಾಡುತ್ತಿದ್ದರು ಎಂಬ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ. ಸಾಕಷ್ಟು ಜನರು ಇರುವಾಗಲೇ ಕಳ್ಳರು ಒಳಗಡೆ ಬಂದು ಗನ್ ತೋರಿಸಿ ರಾಜಾರೋಷವಾಗಿ ಪರಾರಿಯಾಗಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಬೆಳಗಾವಿ ಗಡಿಯಲ್ಲಿ 400 ಕೋಟಿ ದರೋಡೆ ಆಗಿರುವುದು ಬೆಳಕಿಗೆ ಬಂದಿತ್ತು. ಮರುದಿನವೇ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಗನ್ ತೋರಿಸಿ ದರೋಡೆ ಮಾಡಲಾಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲು ದರೋಡೆಯಾಗಿದ್ದು ಮಾದನಾಯಕಹಳ್ಳಿ ಠಾಣೆಯಲ್ಲಿ ಜುವೆಲ್ಲರಿ ಮಾಲೀಕ ದೂರು ದಾಖಲಿಸಿದ್ದಾರೆ.
In a daylight robbery, three miscreants barged into a jewellery shop in Dasanapura near Nelamangala and escaped after looting gold ornaments and cash. The accused threatened the shop owner with a gun and fled with 28 grams of gold and ₹50,000. The entire incident was caught on CCTV, and police have registered a case at Madanayakanahalli police station.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm