ಬ್ರೇಕಿಂಗ್ ನ್ಯೂಸ್
07-02-26 06:44 pm HK News Desk ಕ್ರೈಂ
ಶಿವಮೊಗ್ಗ, ಫೆ.7: ತನ್ನ ಪತ್ನಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು ಮಕ್ಕಳನ್ನೂ ಮತಾಂತರ ಆಗಲು ಒತ್ತಾಯ ಮಾಡುತ್ತಿದ್ದಾಳೆ. ನನಗೂ ಮಾನಸಿಕ ಹಿಂಸೆ ನೀಡುತ್ತಿದ್ದಾಳೆ ಎಂದು ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಬಿ. ವಿನಯ್ ಎಂಬವರು ಪೇಪರ್ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
2011 ರಲ್ಲಿ ಹಾಸನ ಜಿಲ್ಲೆಯ ಪ್ರಿಯತಾ ಎಂಬಾಕೆ ಜೊತೆ ಬೇಲೂರು ತಾಲೂಕಿನ ಹಳೇಬಿಡು ಬನಶಂಕರಿ ಕಲ್ಯಾಣ ಮಂಟಪದಲ್ಲಿ ಲಿಂಗಾಯತ ಕುಂಬಾರ ಪದ್ಧತಿಯಂತೆ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದು, ನಮಗೆ 14 ವರ್ಷದ ಯೋಜ್ಞಾ ಮತ್ತು 8 ವರ್ಷದ ಮನೋಜ್ಞಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 2015ರಲ್ಲಿ ಶಿವಮೊಗ್ಗದ ಪ್ರತಿಷ್ಟಿತ ಖಾಸಗಿ ಶಾಲೆಯಲ್ಲಿ ಪ್ರಿಯತಾ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದ್ದು, ಅಂದಿನಿಂದ ಅವಳು ನಮ್ಮ ಹಿಂದೂ ಸಂಪ್ರದಾಯವನ್ನು ಬಿಟ್ಟು ಕ್ರಿಶ್ಚಿಯನ್ ಧರ್ಮದ ಕಡೆ ಆಸಕ್ತಿ ಹೊಂದಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಮರಿಯಾ ಪ್ರಿಯದರ್ಶಿನಿ ಎಂಬವರ ಸಹಾಯದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ ಎಂದು ಪತಿ ವಿನಯ್ ಆರೋಪಿಸಿದ್ದಾರೆ.
ಮತಾಂತರ ಬಳಿಕ ಪ್ರಿಯತಾ ಚರ್ಚ್ಗೆ ಹೋಗುತ್ತಿದ್ದಳು. ಮನೆಯಲ್ಲಿ ಬೈಬಲ್ ತಂದು ಓದುತ್ತಿದ್ದಳು. ಈ ರೀತಿ ಮಾಡದಂತೆ ಹೇಳಿದರೂ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದೇನೆ, ನೀವು ಕೂಡ ಅದೇ ಧರ್ಮವನ್ನು ಪಾಲಿಸಿ ಎಂದು ಹೇಳುತ್ತಿದ್ದಳು. ನಾನು ಇದಕ್ಕೆ ಒಪ್ಪುತ್ತಿರಲಿಲ್ಲ. ನನ್ನ ಹಿರಿಯ ಮಗಳಿಗೂ ಕ್ರಿಶ್ಚಿಯನ್ ಧರ್ಮ ಪಾಲಿಸುವಂತೆ ಒತ್ತಾಯಿಸುತ್ತಿದ್ದಳು. ಈ ಬಗ್ಗೆ ಮನೆಯಲ್ಲಿ ದಿನವೂ ಜಗಳವಾಗುತ್ತಿತ್ತು.
2019ರಲ್ಲಿ ಪತ್ನಿ ತವರಿಗೆ ಹೋಗಿದ್ದಳು. ಮಕ್ಕಳ ಜೀವನ ಹಾಳಾಗಬಾರದೆಂದು ಪತ್ನಿಗೆ ಮನೆಗೆ ಬರುವಂತೆ ವಿನಂತಿಸಿದ್ದು 2020ರಲ್ಲಿ ವಾಪಸ್ ಮನೆಗೆ ಬಂದಿದ್ದಳು. ಅವಳು ಬಂದಾಗಿನಿಂದ ಬೇರೆಯದ್ದೇ ರೀತಿ ವರ್ತಿಸುತ್ತಿದ್ದಳು. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ರಾರ್ಥನೆ ಮಾಡುತ್ತಿದ್ದು ನನಗೂ ಫಾಲೋ ಮಾಡಲು ಒತ್ತಾಯಿಸುತ್ತಿದ್ದಳು ಎಂದು ಪತಿ ವಿನಯ್ ಕಣ್ಣೀರು ಹಾಕಿದ್ದಾರೆ.
ನನಗೂ ಮತಾಂತರಗೊಳ್ಳಲು ಪೀಡಿಸುತ್ತಿದ್ದು, ಒಪ್ಪದೆ ಇದ್ದುದರಿಂದ ಮಾನಸಿಕ ಹಿಂಸೆ ಮಾಡುತ್ತಿದ್ದಳು. ಅವಳ ಮಾತನ್ನು ಕೇಳದ ಕಾರಣ 2025ರಲ್ಲಿ ನನ್ನನ್ನು ಮತ್ತು ಮಕ್ಕಳನ್ನು ಬಿಟ್ಟು ತವರು ಮನೆಗೆ ಹೋದವಳು ವಾಪಸ್ ಬಂದಿಲ್ಲ. ಇದರ ಹಿಂದೆ ಯಾರಿದ್ದಾರೆ, ಯಾರ ಒತ್ತಡಕ್ಕೆ ಬಿದ್ದು ಹೀಗೆ ಮಾಡುತ್ತಿದ್ದಾಳೆಂದು ಗೊತ್ತಾಗಿಲ್ಲ ಎಂದು ಅಸಹಾಯಕತೆ ತೋರಿದ್ದಾರೆ.
03-04-26 03:48 pm
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm