ಬ್ರೇಕಿಂಗ್ ನ್ಯೂಸ್
07-02-26 10:07 pm HK News Desk ಕ್ರೈಂ
ಬೆಂಗಳೂರು, ಫೆ.7: ಸೈಬರ್ ವಂಚಕರಿಂದ 'ಡಿಜಿಟಲ್ ಅರೆಸ್ಟ್' ಆಗಿ ವಂಚನೆಗೀಡಾದ ಅಮಾಯಕ ಮಹಿಳೆಯೊಬ್ಬರಿಗೆ ಕೇವಲ 15 ನಿಮಿಷಗಳಲ್ಲಿ, ಯಾವುದೇ ದಾಖಲೆಗಳಿಲ್ಲದೆ 50 ಲಕ್ಷ ರೂ. ಸಾಲ ಮಂಜೂರು ಮಾಡಿದ ಐಸಿಐಸಿಐ ಬ್ಯಾಂಕ್ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ವಿರುದ್ಧ ಬ್ಯಾಂಕ್ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡುವ ಮೂಲಕ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ಆದೇಶ ನೀಡಿದೆ.
2024ರ ಸೆಪ್ಟೆಂಬರ್ 17ರಂದು 32 ವರ್ಷದ ಮಹಿಳೆಯೊಬ್ಬರಿಗೆ ಫೆಡ್ಎಕ್ಸ್ ಉದ್ಯೋಗಿ ಎಂದು ಕರೆಯೊಂದು ಬಂದಿತ್ತು. ಕರೆ ಮಾಡಿದ ವ್ಯಕ್ತಿ, ನಿಮ್ಮ ಆಧಾರ್ ಸಂಖ್ಯೆಯನ್ನು ಡ್ರಗ್ಸ್ (ಮಾದಕ ವಸ್ತು) ಕಳ್ಳಸಾಗಣೆಗೆ ಬಳಸಲಾಗಿದೆ ಎಂದು ಬೆದರಿಸಲಾಗಿತ್ತು. ಕರೆಯನ್ನು ಮುಂಬೈ ಪೊಲೀಸರೆಂದು ಹೇಳಿಕೊಂಡವರಿಗೆ ವರ್ಗಾಯಿಸಲಾಯಿತು. ಅಲ್ಲಿಂದ ಡಿಸಿಪಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ, "ನಿಮ್ಮ ಖಾತೆಯ ಹಣ ಬಳಸಿ ಎಕೆ-47 ರೈಫಲ್ ಖರೀದಿಸಲಾಗಿದೆ, ನಿಮ್ಮ ಹೆಸರಿನಲ್ಲಿ ಹಲವು ಅಕ್ರಮ ನಡೆದಿದೆ" ಎಂದು ಬೆದರಿಸಿದ್ದ. ಅಂತಿಮವಾಗಿ ಆರ್ಬಿಐ ಅಧಿಕಾರಿ ಎಂದು ಹೇಳಿಕೊಂಡ ವಂಚಕ, ಸ್ಕೈಪ್ ವಿಡಿಯೋ ಕರೆಯಲ್ಲಿ ಮಹಿಳೆಯನ್ನು ಸುಮಾರು 10 ಗಂಟೆಗಳ ಕಾಲ 'ಡಿಜಿಟಲ್ ಅರೆಸ್ಟ್' ಮಾಡಿ, ಮನೆಯಿಂದ ಹೊರಬರದಂತೆ ಹೇಳಿ ಕೂಡಿಹಾಕಿದ್ದ.
ವಂಚಕರು ಬಳಿಕ ಸಹಾಯ ಮಾಡುವ ನೆಪದಲ್ಲಿ ಸಂತ್ರಸ್ತೆಗೆ ಆನ್ಲೈನ್ ಮೂಲಕ ತ್ವರಿತ ಸಾಲ ಪಡೆಯಲು ಒತ್ತಾಯಿಸಿದರು. ಆಶ್ಚರ್ಯ ಅಂದ್ರೆ, ಐಸಿಐಸಿಐ ಬ್ಯಾಂಕ್ ಕೇವಲ 15 ನಿಮಿಷಗಳಲ್ಲಿ ಬರೋಬ್ಬರಿ 50 ಲಕ್ಷ ರೂ.ಗಳ ಸಾಲವನ್ನು ಮಹಿಳೆಯ ಖಾತೆಗೆ ಜಮೆ ಮಾಡಿತ್ತು. ಸಾಲ ಮರು ಪಾವತಿಯಾಗದ ಬಗ್ಗೆ ಬ್ಯಾಂಕ್ ಮಹಿಳೆಯ ವಿರುದ್ಧ ಕೇಸು ದಾಖಲಿಸಿತ್ತು.
ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು ಪೀಠವು ಬ್ಯಾಂಕ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. "ಯಾವುದೇ ದಾಖಲೆಗಳಿಲ್ಲದೆ, ಪರಿಶೀಲನೆ ಇಲ್ಲದೆ ಬ್ಯಾಂಕ್ 50 ಲಕ್ಷ ರೂಪಾಯಿಯನ್ನು ವರ್ಗಾಯಿಸಿದ್ದು ಹೇಗೆ? ಇಷ್ಟು ದೊಡ್ಡ ಮೊತ್ತದ ಸಾರ್ವಜನಿಕರ ಹಣವನ್ನು ಬ್ಯಾಂಕ್ ಈ ರೀತಿ ಬಿಡುಗಡೆ ಮಾಡಲು ಹೇಗೆ ಸಾಧ್ಯ?" ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಕೂಡ, "ದಾಖಲೆಗಳಿಲ್ಲದೆ ಇಷ್ಟು ದೊಡ್ಡ ಮೊತ್ತ ಬಿಡುಗಡೆಯಾಗಿರುವುದು ಅರ್ಥವಾಗುತ್ತಿಲ್ಲ, ಇದರ ಹಿಂದೆ ಬ್ಯಾಂಕ್ ಸಿಬ್ಬಂದಿಯ ಕೈವಾಡವಿರಬಹುದು" ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಬ್ಯಾಂಕ್ನ ಕೆಲವರು ಸೈಬರ್ ವಂಚಕರೊಂದಿಗೆ ಶಾಮೀಲಾಗಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ.
ಸಂತ್ರಸ್ತೆಯ ಪರ ವಕೀಲ ಸೂರಜ್ ಸಂಪತ್, ವಂಚಕರು ಮಹಿಳೆಯನ್ನು ಹೇಗೆ ಸುದೀರ್ಘವಾಗಿ ಬಂಧನದಲ್ಲಿಟ್ಟಿದ್ದರು ಮತ್ತು ಬ್ಯಾಂಕ್ ಹೇಗೆ ಕಣ್ಣುಮುಚ್ಚಿ ಸಾಲ ನೀಡಿತು ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am