ಬ್ರೇಕಿಂಗ್ ನ್ಯೂಸ್
07-02-26 10:07 pm HK News Desk ಕ್ರೈಂ
ಬೆಂಗಳೂರು, ಫೆ.7: ಸೈಬರ್ ವಂಚಕರಿಂದ 'ಡಿಜಿಟಲ್ ಅರೆಸ್ಟ್' ಆಗಿ ವಂಚನೆಗೀಡಾದ ಅಮಾಯಕ ಮಹಿಳೆಯೊಬ್ಬರಿಗೆ ಕೇವಲ 15 ನಿಮಿಷಗಳಲ್ಲಿ, ಯಾವುದೇ ದಾಖಲೆಗಳಿಲ್ಲದೆ 50 ಲಕ್ಷ ರೂ. ಸಾಲ ಮಂಜೂರು ಮಾಡಿದ ಐಸಿಐಸಿಐ ಬ್ಯಾಂಕ್ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ವಿರುದ್ಧ ಬ್ಯಾಂಕ್ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡುವ ಮೂಲಕ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ಆದೇಶ ನೀಡಿದೆ.
2024ರ ಸೆಪ್ಟೆಂಬರ್ 17ರಂದು 32 ವರ್ಷದ ಮಹಿಳೆಯೊಬ್ಬರಿಗೆ ಫೆಡ್ಎಕ್ಸ್ ಉದ್ಯೋಗಿ ಎಂದು ಕರೆಯೊಂದು ಬಂದಿತ್ತು. ಕರೆ ಮಾಡಿದ ವ್ಯಕ್ತಿ, ನಿಮ್ಮ ಆಧಾರ್ ಸಂಖ್ಯೆಯನ್ನು ಡ್ರಗ್ಸ್ (ಮಾದಕ ವಸ್ತು) ಕಳ್ಳಸಾಗಣೆಗೆ ಬಳಸಲಾಗಿದೆ ಎಂದು ಬೆದರಿಸಲಾಗಿತ್ತು. ಕರೆಯನ್ನು ಮುಂಬೈ ಪೊಲೀಸರೆಂದು ಹೇಳಿಕೊಂಡವರಿಗೆ ವರ್ಗಾಯಿಸಲಾಯಿತು. ಅಲ್ಲಿಂದ ಡಿಸಿಪಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ, "ನಿಮ್ಮ ಖಾತೆಯ ಹಣ ಬಳಸಿ ಎಕೆ-47 ರೈಫಲ್ ಖರೀದಿಸಲಾಗಿದೆ, ನಿಮ್ಮ ಹೆಸರಿನಲ್ಲಿ ಹಲವು ಅಕ್ರಮ ನಡೆದಿದೆ" ಎಂದು ಬೆದರಿಸಿದ್ದ. ಅಂತಿಮವಾಗಿ ಆರ್ಬಿಐ ಅಧಿಕಾರಿ ಎಂದು ಹೇಳಿಕೊಂಡ ವಂಚಕ, ಸ್ಕೈಪ್ ವಿಡಿಯೋ ಕರೆಯಲ್ಲಿ ಮಹಿಳೆಯನ್ನು ಸುಮಾರು 10 ಗಂಟೆಗಳ ಕಾಲ 'ಡಿಜಿಟಲ್ ಅರೆಸ್ಟ್' ಮಾಡಿ, ಮನೆಯಿಂದ ಹೊರಬರದಂತೆ ಹೇಳಿ ಕೂಡಿಹಾಕಿದ್ದ.
ವಂಚಕರು ಬಳಿಕ ಸಹಾಯ ಮಾಡುವ ನೆಪದಲ್ಲಿ ಸಂತ್ರಸ್ತೆಗೆ ಆನ್ಲೈನ್ ಮೂಲಕ ತ್ವರಿತ ಸಾಲ ಪಡೆಯಲು ಒತ್ತಾಯಿಸಿದರು. ಆಶ್ಚರ್ಯ ಅಂದ್ರೆ, ಐಸಿಐಸಿಐ ಬ್ಯಾಂಕ್ ಕೇವಲ 15 ನಿಮಿಷಗಳಲ್ಲಿ ಬರೋಬ್ಬರಿ 50 ಲಕ್ಷ ರೂ.ಗಳ ಸಾಲವನ್ನು ಮಹಿಳೆಯ ಖಾತೆಗೆ ಜಮೆ ಮಾಡಿತ್ತು. ಸಾಲ ಮರು ಪಾವತಿಯಾಗದ ಬಗ್ಗೆ ಬ್ಯಾಂಕ್ ಮಹಿಳೆಯ ವಿರುದ್ಧ ಕೇಸು ದಾಖಲಿಸಿತ್ತು.
ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು ಪೀಠವು ಬ್ಯಾಂಕ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. "ಯಾವುದೇ ದಾಖಲೆಗಳಿಲ್ಲದೆ, ಪರಿಶೀಲನೆ ಇಲ್ಲದೆ ಬ್ಯಾಂಕ್ 50 ಲಕ್ಷ ರೂಪಾಯಿಯನ್ನು ವರ್ಗಾಯಿಸಿದ್ದು ಹೇಗೆ? ಇಷ್ಟು ದೊಡ್ಡ ಮೊತ್ತದ ಸಾರ್ವಜನಿಕರ ಹಣವನ್ನು ಬ್ಯಾಂಕ್ ಈ ರೀತಿ ಬಿಡುಗಡೆ ಮಾಡಲು ಹೇಗೆ ಸಾಧ್ಯ?" ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಕೂಡ, "ದಾಖಲೆಗಳಿಲ್ಲದೆ ಇಷ್ಟು ದೊಡ್ಡ ಮೊತ್ತ ಬಿಡುಗಡೆಯಾಗಿರುವುದು ಅರ್ಥವಾಗುತ್ತಿಲ್ಲ, ಇದರ ಹಿಂದೆ ಬ್ಯಾಂಕ್ ಸಿಬ್ಬಂದಿಯ ಕೈವಾಡವಿರಬಹುದು" ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಬ್ಯಾಂಕ್ನ ಕೆಲವರು ಸೈಬರ್ ವಂಚಕರೊಂದಿಗೆ ಶಾಮೀಲಾಗಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ.
ಸಂತ್ರಸ್ತೆಯ ಪರ ವಕೀಲ ಸೂರಜ್ ಸಂಪತ್, ವಂಚಕರು ಮಹಿಳೆಯನ್ನು ಹೇಗೆ ಸುದೀರ್ಘವಾಗಿ ಬಂಧನದಲ್ಲಿಟ್ಟಿದ್ದರು ಮತ್ತು ಬ್ಯಾಂಕ್ ಹೇಗೆ ಕಣ್ಣುಮುಚ್ಚಿ ಸಾಲ ನೀಡಿತು ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm