ಬ್ರೇಕಿಂಗ್ ನ್ಯೂಸ್
07-02-26 10:48 pm HK News Desk ಕ್ರೈಂ
ಬೆಂಗಳೂರು, ಫೆ.7: ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಬಿಹಾರದ ನಲಂದಾ ಜಿಲ್ಲೆಯ ಧರ್ಮಶಾಲೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ತಿಂಗಳ ಹಿಂದೆ ಫ್ರೀಫೈರ್ ವಿಡಿಯೋ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗನನ್ನು ಕೊಲೆ ಮಾಡಿ ಜೈಲು ಸೇರಿದ್ದ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ.
ಮೃತರನ್ನು ಸುಮಂಗಲ (78), ಅವರ ಪುತ್ರಿಯರಾದ ಶಿಲ್ಪಾ (48) ಮತ್ತು ಶ್ರುತಾ ಜಿ.ಬಿ. (43) ಮತ್ತು ಮಗ ನಾಗಪ್ರಸಾದ್ (50) ಎಂದು ಗುರುತಿಸಲಾಗಿದೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಜೈನ ಸಂಪ್ರದಾಯದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರು.
ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದು ಹಣಕ್ಕಾಗಿ ಪೀಡಿಸುತ್ತಿದ್ದ ಅಕ್ಕನ ಮಗ ಅಮೋಘ ಕೀರ್ತಿಯನ್ನು ಮಾವ ನಾಗಪ್ರಸಾದ್ ಕಳೆದ ವರ್ಷ ಆಗಸ್ಟ್ 8ರಂದು ಕತ್ತು ಸೀಳಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆಯ ಬಳಿಕ ಮೆಜೆಸ್ಟಿಕ್ನಲ್ಲಿ ಮೂರು ದಿನ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದ. ಪೊಲೀಸರು ಆತನ ಮೇಲೆ ಎಫ್ಐಆರ್ ದಾಖಲಿಸಿ ಜೈಲಿಗಟ್ಟಿದ್ದರು. ಬಳಿಕ ಆತನ ತಂಗಿ ಶಿಲ್ಪಾನೇ ಮಗ ಹೇಗೂ ಹೋದ, ಅಣ್ಣನಾದ್ರೂ ಜೊತೆಗಿರಲಿ ಎಂದು ಜಾಮೀನು ಕೊಡಿಸಿ ಜೈಲಿನಿಂದ ಹೊರ ತಂದಿದ್ದಳು.
ಅಕ್ಕನ ಮಗ ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕಾಗಿ ಇಡೀ ಕುಟುಂಬ ಕೆಲವು ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು ಎಂದು ತಿಳಿದುಬಂದಿದೆ. ಆನಂತರ, ಉತ್ತರ ಭಾರತದ ವಿವಿಧ ಕಡೆಗೆ ತೆರಳಿ ಬಿಹಾರಕ್ಕೆ ತಲುಪಿದ್ದರು. ಅಲ್ಲಿ ಜೈನ ಮತಸ್ಥರ ಧರ್ಮಶಾಲೆಯಲ್ಲಿ ತಂಗಿದ್ದಾಗ ಸಾವಿಗೆ ಶರಣಾಗಿದ್ದಾರೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಮಾತ್ರೆಗಳ ಓವರ್ ಡೋಸ್ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm