ಬ್ರೇಕಿಂಗ್ ನ್ಯೂಸ್
07-02-26 10:48 pm HK News Desk ಕ್ರೈಂ
ಬೆಂಗಳೂರು, ಫೆ.7: ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಬಿಹಾರದ ನಲಂದಾ ಜಿಲ್ಲೆಯ ಧರ್ಮಶಾಲೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ತಿಂಗಳ ಹಿಂದೆ ಫ್ರೀಫೈರ್ ವಿಡಿಯೋ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗನನ್ನು ಕೊಲೆ ಮಾಡಿ ಜೈಲು ಸೇರಿದ್ದ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ.
ಮೃತರನ್ನು ಸುಮಂಗಲ (78), ಅವರ ಪುತ್ರಿಯರಾದ ಶಿಲ್ಪಾ (48) ಮತ್ತು ಶ್ರುತಾ ಜಿ.ಬಿ. (43) ಮತ್ತು ಮಗ ನಾಗಪ್ರಸಾದ್ (50) ಎಂದು ಗುರುತಿಸಲಾಗಿದೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಜೈನ ಸಂಪ್ರದಾಯದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರು.
ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದು ಹಣಕ್ಕಾಗಿ ಪೀಡಿಸುತ್ತಿದ್ದ ಅಕ್ಕನ ಮಗ ಅಮೋಘ ಕೀರ್ತಿಯನ್ನು ಮಾವ ನಾಗಪ್ರಸಾದ್ ಕಳೆದ ವರ್ಷ ಆಗಸ್ಟ್ 8ರಂದು ಕತ್ತು ಸೀಳಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆಯ ಬಳಿಕ ಮೆಜೆಸ್ಟಿಕ್ನಲ್ಲಿ ಮೂರು ದಿನ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದ. ಪೊಲೀಸರು ಆತನ ಮೇಲೆ ಎಫ್ಐಆರ್ ದಾಖಲಿಸಿ ಜೈಲಿಗಟ್ಟಿದ್ದರು. ಬಳಿಕ ಆತನ ತಂಗಿ ಶಿಲ್ಪಾನೇ ಮಗ ಹೇಗೂ ಹೋದ, ಅಣ್ಣನಾದ್ರೂ ಜೊತೆಗಿರಲಿ ಎಂದು ಜಾಮೀನು ಕೊಡಿಸಿ ಜೈಲಿನಿಂದ ಹೊರ ತಂದಿದ್ದಳು.
ಅಕ್ಕನ ಮಗ ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕಾಗಿ ಇಡೀ ಕುಟುಂಬ ಕೆಲವು ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು ಎಂದು ತಿಳಿದುಬಂದಿದೆ. ಆನಂತರ, ಉತ್ತರ ಭಾರತದ ವಿವಿಧ ಕಡೆಗೆ ತೆರಳಿ ಬಿಹಾರಕ್ಕೆ ತಲುಪಿದ್ದರು. ಅಲ್ಲಿ ಜೈನ ಮತಸ್ಥರ ಧರ್ಮಶಾಲೆಯಲ್ಲಿ ತಂಗಿದ್ದಾಗ ಸಾವಿಗೆ ಶರಣಾಗಿದ್ದಾರೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಮಾತ್ರೆಗಳ ಓವರ್ ಡೋಸ್ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm