ಬ್ರೇಕಿಂಗ್ ನ್ಯೂಸ್
07-02-26 10:48 pm HK News Desk ಕ್ರೈಂ
ಬೆಂಗಳೂರು, ಫೆ.7: ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಬಿಹಾರದ ನಲಂದಾ ಜಿಲ್ಲೆಯ ಧರ್ಮಶಾಲೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ತಿಂಗಳ ಹಿಂದೆ ಫ್ರೀಫೈರ್ ವಿಡಿಯೋ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗನನ್ನು ಕೊಲೆ ಮಾಡಿ ಜೈಲು ಸೇರಿದ್ದ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ.
ಮೃತರನ್ನು ಸುಮಂಗಲ (78), ಅವರ ಪುತ್ರಿಯರಾದ ಶಿಲ್ಪಾ (48) ಮತ್ತು ಶ್ರುತಾ ಜಿ.ಬಿ. (43) ಮತ್ತು ಮಗ ನಾಗಪ್ರಸಾದ್ (50) ಎಂದು ಗುರುತಿಸಲಾಗಿದೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಜೈನ ಸಂಪ್ರದಾಯದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರು.
ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದು ಹಣಕ್ಕಾಗಿ ಪೀಡಿಸುತ್ತಿದ್ದ ಅಕ್ಕನ ಮಗ ಅಮೋಘ ಕೀರ್ತಿಯನ್ನು ಮಾವ ನಾಗಪ್ರಸಾದ್ ಕಳೆದ ವರ್ಷ ಆಗಸ್ಟ್ 8ರಂದು ಕತ್ತು ಸೀಳಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆಯ ಬಳಿಕ ಮೆಜೆಸ್ಟಿಕ್ನಲ್ಲಿ ಮೂರು ದಿನ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದ. ಪೊಲೀಸರು ಆತನ ಮೇಲೆ ಎಫ್ಐಆರ್ ದಾಖಲಿಸಿ ಜೈಲಿಗಟ್ಟಿದ್ದರು. ಬಳಿಕ ಆತನ ತಂಗಿ ಶಿಲ್ಪಾನೇ ಮಗ ಹೇಗೂ ಹೋದ, ಅಣ್ಣನಾದ್ರೂ ಜೊತೆಗಿರಲಿ ಎಂದು ಜಾಮೀನು ಕೊಡಿಸಿ ಜೈಲಿನಿಂದ ಹೊರ ತಂದಿದ್ದಳು.
ಅಕ್ಕನ ಮಗ ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕಾಗಿ ಇಡೀ ಕುಟುಂಬ ಕೆಲವು ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು ಎಂದು ತಿಳಿದುಬಂದಿದೆ. ಆನಂತರ, ಉತ್ತರ ಭಾರತದ ವಿವಿಧ ಕಡೆಗೆ ತೆರಳಿ ಬಿಹಾರಕ್ಕೆ ತಲುಪಿದ್ದರು. ಅಲ್ಲಿ ಜೈನ ಮತಸ್ಥರ ಧರ್ಮಶಾಲೆಯಲ್ಲಿ ತಂಗಿದ್ದಾಗ ಸಾವಿಗೆ ಶರಣಾಗಿದ್ದಾರೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಮಾತ್ರೆಗಳ ಓವರ್ ಡೋಸ್ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm