ಬ್ರೇಕಿಂಗ್ ನ್ಯೂಸ್
09-02-26 11:26 am Mangalore Correspondent ಕ್ರೈಂ
ಮಂಗಳೂರು, ಫೆ.9 : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ.
ಮಾರುತಿ ಓಮ್ನಿ ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಸ್ಕೂಟರ್ ನಲ್ಲಿ ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಡ್ಡಗಟ್ಟಿ ಕಾರಿನ ಒಳಗೆಳೆದು ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ. 16 ವರ್ಷದ ಬಾಲಕಿ ಕಾಶಿಬೆಟ್ಟು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಸುಮಾರು 8:30ಕ್ಕೆ ಸ್ಕೂಟರ್ ಇಟ್ಟು ಸಂತೆಕಟ್ಟೆಯಲ್ಲಿ ಬಸ್ ಹತ್ತಲು ತೆರಳುವಾಗ ಕಾರಿನಲ್ಲಿ ಬಂದವರು ತಡೆದು ನಿಲ್ಲಿಸಿದ್ದಾರೆ.
ಕಾರಿನ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ್ದು ಅದರಲ್ಲಿ ಮೂವರು ದುಷ್ಕರ್ಮಿಗಳು ಕೂಡ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರೆಂದು ತಿಳಿದುಬಂದಿದೆ. ಬಾಲಕಿಯನ್ನು ಕಾರಿನ ಒಳಗೆ ಎಳೆಯಲು ಯತ್ನಿಸಿದಾಗ, ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ, ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿ ದುಷ್ಕರ್ಮಿಗಳು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಯುವತಿಯ ಕೈಗೆ ಮತ್ತು ಬೆರಳಿಗೆ ಚೂರಿಯಿಂದ ಚುಚ್ಚಿದ ಗಾಯವಾಗಿದ್ದು ಕಾಲೇಜು ಬ್ಯಾಗ್ ನೊಂದಿಗೆ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
A 16-year-old college student narrowly escaped a kidnap attempt in Belthangady after three unidentified men in a car tried to force her inside. The girl resisted and raised an alarm, prompting the accused to flee. She sustained minor injuries and is undergoing treatment, while police have launched an investigation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm