ಬ್ರೇಕಿಂಗ್ ನ್ಯೂಸ್
10-02-26 10:59 am Mangalore Correspondent ಕ್ರೈಂ
ಮಂಗಳೂರು, ಫೆ.10: ಬೆಳ್ತಂಗಡಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಲೇಜು ಓದುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ ಪ್ರಕರಣ ಪೊಲೀಸರ ತನಿಖೆಯಲ್ಲಿ ಠುಸ್ ಆಗಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ ನಲ್ಲಿ ಗೀಚಿಕೊಂಡು ಅಪಹರಣ ಪ್ರಹಸನದ ಕತೆ ಕಟ್ಟಿದ್ದಾಳೆಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಕಾಶಿಬೆಟ್ಟು ಸರ್ಕಾರಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಸ್ಕೂಟರ್ ತಡೆದು ಕಾರಿನಲ್ಲಿ ಬಂದಿದ್ದ ಮುಸುಕುಧಾರಿಗಳು ಸುದೆಮುಗೇರು ಎಂಬಲ್ಲಿ ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ, ಈ ವೇಳೆ ತನ್ನ ಕೈಗೆ ಚೂರಿಯಿಂದ ಹಲ್ಲೆ ಮಾಡಿದ್ದಾರೆಂದು ಯುವತಿ ದೂರಿದ್ದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಭಾರೀ ಸಂಚಲನ ಮೂಡಿಸಿದ್ದರಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಪೊಲೀಸರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಲ್ಲದೆ ಘಟನೆ ಬಗ್ಗೆ ಮಾಹಿತಿ ಪಡೆದಿದ್ದರು.
ಕಾರಿನ ನಂಬರ್ ಪ್ಲೇಟಿಗೆ ಬಟ್ಟೆ ಕಟ್ಟಿದ್ದರು, ಮುಖಕ್ಕೆ ಮುಸುಕು ಹಾಕಿದ್ದು ಮೂವರಿದ್ದರು, ಹಿಂದಿನಿಂದ ಬೈಕ್ ಬಂದಿದ್ದನ್ನು ನೋಡಿ ಕಾರಿನಲ್ಲಿದ್ದವರು ತನ್ನನ್ನು ಬಿಟ್ಟು ಎಸ್ಕೇಪ್ ಆಗಿದ್ದರೆಂದು ಯುವತಿ ತಿಳಿಸಿದ್ದಳು. ಇದರಂತೆ, ಪೊಲೀಸರು ಆಸುಪಾಸಿನಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದರು. ಪೊಲೀಸರಿಗೆ ಸಾಂದರ್ಭಿಕ ಸಾಕ್ಷ್ಯಗಳು ಸಿಗದೇ ಇದ್ದುದರಿಂದ ವಿದ್ಯಾರ್ಥಿನಿಯನ್ನೇ ಹೆಚ್ಚುವರಿ ಮಾಹಿತಿ ಪಡೆಯಲು ಮುಂದಾಗಿದ್ದರು. ಕಾರಿನ ಬಣ್ಣ ಯಾವುದು, ಯಾವ ಕಾರು, ಹೇಗಿತ್ತು, ಘಟನೆ ಕರೆಕ್ಟ್ ಆಗಿ ಎಲ್ಲಿ ಆಗಿರೋದು ಇತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟಾಗ ಆಕೆ ತಬ್ಬಿಬ್ಬು ಆಗಿದ್ದಳು.

ಕೊನೆಗೆ, ಅಪಹರಣ ಘಟನೆಯೇ ಸುಳ್ಳು, ಬೇರೆ ಕಾಲೇಜು ಸೇರುವುದಕ್ಕಾಗಿ ಅಪಹರಣದ ಕತೆ ಕಟ್ಟಿದ್ದಾಗಿ ತಿಳಿಸಿದ್ದಾಳೆ. ಗ್ರಾಮೀಣ ಭಾಗದ ಕಾಲೇಜು ಬದಲು ಮಂಗಳೂರು ನಗರದ ಕಾಲೇಜಿಗೆ ಹೋಗಲು ಬಯಸಿದ್ದು ಅದಕ್ಕಾಗಿ ತಾನೇ ಬ್ಲೇಡ್ ನಿಂದ ಕೈಯನ್ನು ಕೊಯ್ದುಕೊಂಡಿದ್ದಾಗಿ ತಿಳಿಸಿದ್ದಾಳೆ. ಇದಲ್ಲದೆ, ತನ್ನ ಮನೆಯ ಸಮೀಪವೇ ಪುಸ್ತಕಗಳನ್ನು ಸುಟ್ಟು ಹಾಕಿದ್ದಳು, ಇದರಂತೆ, ತನ್ನ ಬ್ಯಾಗನ್ನು ಅಪಹರಣಕ್ಕೆ ಬಂದಿದ್ದವರು ಹೊತ್ತೊಯ್ದಿದ್ದಾರೆ ಎಂದು ಕತೆ ಸೃಷ್ಟಿಸಿದ್ದಳು.
ಕೈ ಮೇಲಿನ ಗಾಯಗಳನ್ನು ನೋಡಿ ಮತ್ತು ಆಕೆಯ ಹೇಳಿಕೆಯಲ್ಲೇ ಅನುಮಾನಗೊಂಡಿದ್ದ ಪೊಲೀಸರು ಕೂಲಂಕುಷ ವಿಚಾರಣೆ ನಡೆಸಿದಾಗ ಸತ್ಯ ಬಿಚ್ಚಿಟ್ಟಿದ್ದಾಳೆ. ವಿಚಾರಣೆ ಸಂದರ್ಭ ಅಪ್ರಾಪ್ತ ವಿದ್ಯಾರ್ಥಿನಿ ಸುಳ್ಳು ಕತೆ ಹೇಳಿದ್ದನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ. ಇದರೊಂದಿಗೆ, ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ.
A sensational alleged abduction attempt reported from Belthangady has taken a dramatic twist after police investigation revealed that the entire incident was staged by the girl herself. The minor girl had initially claimed that a group of masked miscreants arrived in a car and attempted to abduct her in broad daylight. Based on her statement, police launched an investigation from all possible angles, treating the case as a serious kidnapping attempt.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm