ಬ್ರೇಕಿಂಗ್ ನ್ಯೂಸ್
13-02-26 12:54 am HK News Desk ಕ್ರೈಂ
ಬೆಂಗಳೂರು, ಫೆ 12: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ ನನ್ನ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಗುರುವಾರ ರಾತ್ರಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಅಹಮದಾಬಾದ್ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸಿಐಡಿ ಅಧಿಕಾರಿಗಳು, ಬೈರತಿ ಬಸವರಾಜ್ ನನ್ನ ಟರ್ಮಿನಲ್ ಒಳಗಡೆಯೇ ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಸದ್ಯ ಪೊಲೀಸರು ಭೈರತಿ ನನ್ನ ಏರ್ಪೋರ್ಟ್ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

ಏನಿದು ಪ್ರಕರಣ?
ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಎಫ್ಐಆರ್ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ನನ್ನ ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.
ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು. ಬಳಿಕ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಅವರನ್ನ ಬಂಧಿಸಲು ಸಿಬಿಐ ಹುಡುಕಾಟ ನಡೆಸುತಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm