ಬ್ರೇಕಿಂಗ್ ನ್ಯೂಸ್
13-02-26 11:52 am HK News Desk ಕ್ರೈಂ
ನವದೆಹಲಿ, ಫೆ.12: ಡಿಜಿಟಲ್ ವಂಚನೆ ಪ್ರಕರಣಗಳು ಜಗತ್ತಿನಾದ್ಯಂತ ಹೆಚ್ಚುತ್ತಿರುವಾಗಲೇ ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆಯನ್ನು ತೆರೆದು ಅದರ ಮೂಲಕವೇ ಸೈಬರ್ ವಂಚನಾ ಜಾಲ ನಡೆಸುತ್ತಿದ್ದುದನ್ನು ತನಿಖಾ ತಂಡ ಪತ್ತೆಹಚ್ಚಿದೆ.
ವಿಯೆಟ್ನಾಂ ಗಡಿಗೆ ಹೊಂದಿಕೊಂಡಿರುವ ಕಾಂಪೊಟ್ ಪ್ರಾಂತ್ಯದಲ್ಲಿ 'ಡಿಜಿಟಲ್ ಅರೆಸ್ಟ್' ಸೇರಿ ವಿವಿಧ ಬಗೆಯ ವಂಚನೆ ಚಟುವಟಿಕೆ ನಡೆಸುತ್ತಿದ್ದ ಖತರ್ನಾಕ್ ಜಾಲವನ್ನು ವಿಯೆಟ್ನಾಂ ಪೊಲೀಸ್ ಪಡೆ ಪತ್ತೆ ಮಾಡಿದೆ. ಅಂತಾರಾಷ್ಟ್ರೀಯ ವಂಚನೆಗಳಿಗೆ ತಡೆ ಹಾಕಲು ಕಾಂಬೋಡಿಯಾ ಪೊಲೀಸರು ಇತ್ತೀಚೆಗೆ ಭಾರಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 190 ಸ್ಕ್ಯಾಮ್ ಸೆಂಟರ್ಗಳನ್ನು ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ. 173 ಅಧಿಕಾರಿ ಸೋಗಿನಲ್ಲಿದ್ದ ಸೈಬರ್ ವಂಚಕರನ್ನೂ ಬಂಧಿಸಲಾಗಿದೆ. ಈ ಸೆಂಟರ್ಗಳನ್ನು ಭಾರತೀಯ ಪೊಲೀಸ್ ಠಾಣೆಯೆಂದು ಬಿಂಬಿಸಿ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಭಾರತೀಯರೇ ಟಾರ್ಗೆಟ್ !
ಸೈಬರ್ ಜಾಲದ ಸೂತ್ರಧಾರಿ ಚೀನಾ ಮೂಲದ ಕಿಂಗ್ ಪಿನ್ ಲೀ ಕುಯಾಂಗ್ ಎಂದು ಶಂಕಿಸಲಾಗಿದೆ. ನಕಲಿ ಪೊಲೀಸ್ ಠಾಣೆಯು ಸಿನಿಮಾ ಸೆಟ್ ರೀತಿಯಿದ್ದು ಪಾಳುಬಿದ್ದ ಕಟ್ಟಡ, ಕಾಂಪೌಂಡ್ನಲ್ಲಿ ತಾತ್ಕಾಲಿಕ ಎನ್ನುವಂತೆ ನಿರ್ಮಿಸಲಾಗಿದೆ. ಇದರಲ್ಲಿ ಮುಂಬಯಿ ಪೊಲೀಸ್ ಹಾಗೂ ಸಿಬಿಐ ಲೋಗೊಗಳಿರುವ ನಕಲಿ ಸೈನ್ ಬೋರ್ಡ್ ಗಳಿವೆ. ಎರಡೂ ಬದಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಅಳವಡಿಸಲಾಗಿದೆ. ವಿದೇಶಗಳಲ್ಲಿರುವ ಭಾರತೀಯರನ್ನು 'ಡಿಜಿಟಲ್ ಅರೆಸ್ಟ್' ಹೆಸರಲ್ಲಿ ವಂಚಿಸುವ ಜಾಲ ಇದಾಗಿದೆ ಎಂದು ವಿಯೆಟ್ನಾಂ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸರು ನೇಪಾಳದಲ್ಲಿದ್ದುಕೊಂಡು ಸೈಬರ್ ವಂಚನೆ ನಡೆಸುತ್ತಿದ್ದ ಜಾಲವನ್ನು ಭೇದಿಸಿದ್ದರು. ಈ ವೇಳೆ, ಇವರಿಗೆ ಕಾಂಬೋಡಿಯಾದಲ್ಲಿ ನೆಟ್ವರ್ಕ್ ಇರೋದು, ಹಣವನ್ನು ಯುಎಸ್ ಡಾಲರಿಗೆ ಪರಿವರ್ತಿಸುವ ಜಾಲ ಇರುವುದು ತಿಳಿದುಬಂದಿತ್ತು. ಮಲೇಶಿಯಾ, ಥಾಯ್ಲೆಂಡಿಗೆ ಉದ್ಯೋಗಕ್ಕೆ ತೆರಳುವ ಭಾರತೀಯರನ್ನೇ ಬಳಸಿಕೊಂಡು ಸೈಬರ್ ವಂಚನಾ ಜಾಲ ನಡೆಸುತ್ತಿರುವುದೂ ಪತ್ತೆಯಾಗಿತ್ತು.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am