ಬ್ರೇಕಿಂಗ್ ನ್ಯೂಸ್
13-02-26 11:52 am HK News Desk ಕ್ರೈಂ
ನವದೆಹಲಿ, ಫೆ.12: ಡಿಜಿಟಲ್ ವಂಚನೆ ಪ್ರಕರಣಗಳು ಜಗತ್ತಿನಾದ್ಯಂತ ಹೆಚ್ಚುತ್ತಿರುವಾಗಲೇ ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆಯನ್ನು ತೆರೆದು ಅದರ ಮೂಲಕವೇ ಸೈಬರ್ ವಂಚನಾ ಜಾಲ ನಡೆಸುತ್ತಿದ್ದುದನ್ನು ತನಿಖಾ ತಂಡ ಪತ್ತೆಹಚ್ಚಿದೆ.
ವಿಯೆಟ್ನಾಂ ಗಡಿಗೆ ಹೊಂದಿಕೊಂಡಿರುವ ಕಾಂಪೊಟ್ ಪ್ರಾಂತ್ಯದಲ್ಲಿ 'ಡಿಜಿಟಲ್ ಅರೆಸ್ಟ್' ಸೇರಿ ವಿವಿಧ ಬಗೆಯ ವಂಚನೆ ಚಟುವಟಿಕೆ ನಡೆಸುತ್ತಿದ್ದ ಖತರ್ನಾಕ್ ಜಾಲವನ್ನು ವಿಯೆಟ್ನಾಂ ಪೊಲೀಸ್ ಪಡೆ ಪತ್ತೆ ಮಾಡಿದೆ. ಅಂತಾರಾಷ್ಟ್ರೀಯ ವಂಚನೆಗಳಿಗೆ ತಡೆ ಹಾಕಲು ಕಾಂಬೋಡಿಯಾ ಪೊಲೀಸರು ಇತ್ತೀಚೆಗೆ ಭಾರಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 190 ಸ್ಕ್ಯಾಮ್ ಸೆಂಟರ್ಗಳನ್ನು ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ. 173 ಅಧಿಕಾರಿ ಸೋಗಿನಲ್ಲಿದ್ದ ಸೈಬರ್ ವಂಚಕರನ್ನೂ ಬಂಧಿಸಲಾಗಿದೆ. ಈ ಸೆಂಟರ್ಗಳನ್ನು ಭಾರತೀಯ ಪೊಲೀಸ್ ಠಾಣೆಯೆಂದು ಬಿಂಬಿಸಿ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಭಾರತೀಯರೇ ಟಾರ್ಗೆಟ್ !
ಸೈಬರ್ ಜಾಲದ ಸೂತ್ರಧಾರಿ ಚೀನಾ ಮೂಲದ ಕಿಂಗ್ ಪಿನ್ ಲೀ ಕುಯಾಂಗ್ ಎಂದು ಶಂಕಿಸಲಾಗಿದೆ. ನಕಲಿ ಪೊಲೀಸ್ ಠಾಣೆಯು ಸಿನಿಮಾ ಸೆಟ್ ರೀತಿಯಿದ್ದು ಪಾಳುಬಿದ್ದ ಕಟ್ಟಡ, ಕಾಂಪೌಂಡ್ನಲ್ಲಿ ತಾತ್ಕಾಲಿಕ ಎನ್ನುವಂತೆ ನಿರ್ಮಿಸಲಾಗಿದೆ. ಇದರಲ್ಲಿ ಮುಂಬಯಿ ಪೊಲೀಸ್ ಹಾಗೂ ಸಿಬಿಐ ಲೋಗೊಗಳಿರುವ ನಕಲಿ ಸೈನ್ ಬೋರ್ಡ್ ಗಳಿವೆ. ಎರಡೂ ಬದಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಅಳವಡಿಸಲಾಗಿದೆ. ವಿದೇಶಗಳಲ್ಲಿರುವ ಭಾರತೀಯರನ್ನು 'ಡಿಜಿಟಲ್ ಅರೆಸ್ಟ್' ಹೆಸರಲ್ಲಿ ವಂಚಿಸುವ ಜಾಲ ಇದಾಗಿದೆ ಎಂದು ವಿಯೆಟ್ನಾಂ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸರು ನೇಪಾಳದಲ್ಲಿದ್ದುಕೊಂಡು ಸೈಬರ್ ವಂಚನೆ ನಡೆಸುತ್ತಿದ್ದ ಜಾಲವನ್ನು ಭೇದಿಸಿದ್ದರು. ಈ ವೇಳೆ, ಇವರಿಗೆ ಕಾಂಬೋಡಿಯಾದಲ್ಲಿ ನೆಟ್ವರ್ಕ್ ಇರೋದು, ಹಣವನ್ನು ಯುಎಸ್ ಡಾಲರಿಗೆ ಪರಿವರ್ತಿಸುವ ಜಾಲ ಇರುವುದು ತಿಳಿದುಬಂದಿತ್ತು. ಮಲೇಶಿಯಾ, ಥಾಯ್ಲೆಂಡಿಗೆ ಉದ್ಯೋಗಕ್ಕೆ ತೆರಳುವ ಭಾರತೀಯರನ್ನೇ ಬಳಸಿಕೊಂಡು ಸೈಬರ್ ವಂಚನಾ ಜಾಲ ನಡೆಸುತ್ತಿರುವುದೂ ಪತ್ತೆಯಾಗಿತ್ತು.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm