ಬ್ರೇಕಿಂಗ್ ನ್ಯೂಸ್
13-02-26 11:52 am HK News Desk ಕ್ರೈಂ
ನವದೆಹಲಿ, ಫೆ.12: ಡಿಜಿಟಲ್ ವಂಚನೆ ಪ್ರಕರಣಗಳು ಜಗತ್ತಿನಾದ್ಯಂತ ಹೆಚ್ಚುತ್ತಿರುವಾಗಲೇ ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆಯನ್ನು ತೆರೆದು ಅದರ ಮೂಲಕವೇ ಸೈಬರ್ ವಂಚನಾ ಜಾಲ ನಡೆಸುತ್ತಿದ್ದುದನ್ನು ತನಿಖಾ ತಂಡ ಪತ್ತೆಹಚ್ಚಿದೆ.
ವಿಯೆಟ್ನಾಂ ಗಡಿಗೆ ಹೊಂದಿಕೊಂಡಿರುವ ಕಾಂಪೊಟ್ ಪ್ರಾಂತ್ಯದಲ್ಲಿ 'ಡಿಜಿಟಲ್ ಅರೆಸ್ಟ್' ಸೇರಿ ವಿವಿಧ ಬಗೆಯ ವಂಚನೆ ಚಟುವಟಿಕೆ ನಡೆಸುತ್ತಿದ್ದ ಖತರ್ನಾಕ್ ಜಾಲವನ್ನು ವಿಯೆಟ್ನಾಂ ಪೊಲೀಸ್ ಪಡೆ ಪತ್ತೆ ಮಾಡಿದೆ. ಅಂತಾರಾಷ್ಟ್ರೀಯ ವಂಚನೆಗಳಿಗೆ ತಡೆ ಹಾಕಲು ಕಾಂಬೋಡಿಯಾ ಪೊಲೀಸರು ಇತ್ತೀಚೆಗೆ ಭಾರಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 190 ಸ್ಕ್ಯಾಮ್ ಸೆಂಟರ್ಗಳನ್ನು ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ. 173 ಅಧಿಕಾರಿ ಸೋಗಿನಲ್ಲಿದ್ದ ಸೈಬರ್ ವಂಚಕರನ್ನೂ ಬಂಧಿಸಲಾಗಿದೆ. ಈ ಸೆಂಟರ್ಗಳನ್ನು ಭಾರತೀಯ ಪೊಲೀಸ್ ಠಾಣೆಯೆಂದು ಬಿಂಬಿಸಿ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಭಾರತೀಯರೇ ಟಾರ್ಗೆಟ್ !
ಸೈಬರ್ ಜಾಲದ ಸೂತ್ರಧಾರಿ ಚೀನಾ ಮೂಲದ ಕಿಂಗ್ ಪಿನ್ ಲೀ ಕುಯಾಂಗ್ ಎಂದು ಶಂಕಿಸಲಾಗಿದೆ. ನಕಲಿ ಪೊಲೀಸ್ ಠಾಣೆಯು ಸಿನಿಮಾ ಸೆಟ್ ರೀತಿಯಿದ್ದು ಪಾಳುಬಿದ್ದ ಕಟ್ಟಡ, ಕಾಂಪೌಂಡ್ನಲ್ಲಿ ತಾತ್ಕಾಲಿಕ ಎನ್ನುವಂತೆ ನಿರ್ಮಿಸಲಾಗಿದೆ. ಇದರಲ್ಲಿ ಮುಂಬಯಿ ಪೊಲೀಸ್ ಹಾಗೂ ಸಿಬಿಐ ಲೋಗೊಗಳಿರುವ ನಕಲಿ ಸೈನ್ ಬೋರ್ಡ್ ಗಳಿವೆ. ಎರಡೂ ಬದಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಅಳವಡಿಸಲಾಗಿದೆ. ವಿದೇಶಗಳಲ್ಲಿರುವ ಭಾರತೀಯರನ್ನು 'ಡಿಜಿಟಲ್ ಅರೆಸ್ಟ್' ಹೆಸರಲ್ಲಿ ವಂಚಿಸುವ ಜಾಲ ಇದಾಗಿದೆ ಎಂದು ವಿಯೆಟ್ನಾಂ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸರು ನೇಪಾಳದಲ್ಲಿದ್ದುಕೊಂಡು ಸೈಬರ್ ವಂಚನೆ ನಡೆಸುತ್ತಿದ್ದ ಜಾಲವನ್ನು ಭೇದಿಸಿದ್ದರು. ಈ ವೇಳೆ, ಇವರಿಗೆ ಕಾಂಬೋಡಿಯಾದಲ್ಲಿ ನೆಟ್ವರ್ಕ್ ಇರೋದು, ಹಣವನ್ನು ಯುಎಸ್ ಡಾಲರಿಗೆ ಪರಿವರ್ತಿಸುವ ಜಾಲ ಇರುವುದು ತಿಳಿದುಬಂದಿತ್ತು. ಮಲೇಶಿಯಾ, ಥಾಯ್ಲೆಂಡಿಗೆ ಉದ್ಯೋಗಕ್ಕೆ ತೆರಳುವ ಭಾರತೀಯರನ್ನೇ ಬಳಸಿಕೊಂಡು ಸೈಬರ್ ವಂಚನಾ ಜಾಲ ನಡೆಸುತ್ತಿರುವುದೂ ಪತ್ತೆಯಾಗಿತ್ತು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm