ಬ್ರೇಕಿಂಗ್ ನ್ಯೂಸ್
14-02-26 10:47 pm HK Staffer ಕ್ರೈಂ
ನವದೆಹಲಿ, ಫೆ.14: ಪ್ರೇಮಿಗಳ ದಿನಾಚರಣೆ ದಿನವೇ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 39ರಲ್ಲಿ ಪಾರ್ಕ್ ಮಾಡಿದ್ದ ಟಾಟಾ ಅಲ್ಟ್ರೋಜ್ ಕಾರಿನಲ್ಲಿ ಪ್ರೇಮಿಗಳಾದ ಸುಮಿತ್ ಹಾಗೂ ರೇಖಾ ಎಂಬಿಬ್ಬರ ಶವಗಳು ಪತ್ತೆಯಾಗಿವೆ. ತಮ್ಮ ಕೊನೆಯ ಕ್ಷಣಗಳನ್ನು ಈ ಜೋಡಿ ಇದೇ ಕಾರಿನಲ್ಲಿ ಕಳೆದಿದ್ದಾರೆ. ಸುಮಿತ್ ಹಾಗೂ ರೇಖಾ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದರ ನಡುವೆ, ರೇಖಾಗೆ ಮನೆಯಲ್ಲಿ ಬೇರೆ ವರನನ್ನು ನೋಡಿದ್ದು, ಮದುವೆಗೆ ಮುಂದಾಗಿದ್ದರು. ಈ ವಿಷಯ ತಿಳಿದ ಸುಮಿತ್ ಕೊನೆಯದಾಗಿ ಭೇಟಿಯಾಗುವುದಾಗಿ ಹೇಳಿ ರೇಖಾಳ ಕರೆದಿದ್ದು, ಕಾರಿನಲ್ಲಿ ಕೂರಿಸಿಕೊಂಡು ಸೆಕ್ಟರ್ 39ರ ಬಳಿ ಬಂದಿದ್ದಾನೆ. ಬಳಿಕ ರಿವಾಲ್ವರ್ ತೆಗೆದು ಮೊದಲು ರೇಖಾ ಹಣೆಗೆ ಗುಂಡಿಕ್ಕಿದ್ದರೆ, ಬಳಿಕ ತನ್ನ ತಲೆಗೆ ಗುಂಡಿಕ್ಕಿ ದುರಂತ ಅಂತ್ಯ ಕಂಡಿದ್ದಾರೆ
ಸುಮಿತ್ ಕಳುಗಿಸಿದ ಮೆಸೇಜ್ನಲ್ಲಿ ಪ್ರೀತಿ, ಮದುವೆ ವಿಚಾರ ಹೇಳಿಕೊಂಡಿದ್ದ. ನನ್ನ ನಿರ್ಧಾರಕ್ಕೆ ರೇಖಾ ಕಾರಣ. ಕಳೆದ 15 ವರ್ಷದಿಂದ ನಾವು ಪ್ರೀತಿಸುತ್ತಿದ್ದೇವೆ. ಇದೀಗ ಆಕೆ ಬೇರೆಯೊಬ್ಬನ ಮದುವೆಯಾಗುತ್ತಿದ್ದಾಳೆ. ನನಗೆ ಮೋಸ ಮಾಡಿದ್ದಾಳೆ. ಇದು ನನಗೆ ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಬದುಕು ಅಂತ್ಯಗೊಳಿಸುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದಾನೆ.
ಶುಕ್ರವಾರ ರೇಖಾಳ ಜೊತೆ ತೆರಳಿದ್ದು ಇಬ್ಬರೂ ಮನೆಗೆ ಮರಳಿಲ್ಲ. ಗಾಬರಿಗೊಂಡ ಎರಡೂ ಮನೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಟವರ್ ಲೋಕೇಶನ್ ಪತ್ತೆಹಚ್ಚಿ ಹುಡುಕಿದಾಗ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಒಳಗಿನಿಂದ ಲಾಕ್ ಮಾಡಿಕೊಂಡು ಇಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಮೇಲ್ನೋಟಕ್ಕೆ ಪ್ರೀತಿ ವಿಚಾರದಲ್ಲಿ ಬದುಕು ಅಂತ್ಯಗೊಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
A young couple was found dead inside a parked car in Sector 39 of Noida on Valentine’s Day, in a suspected case of murder-suicide, police said. The deceased have been identified as Sumit and Rekha, who were reportedly in a relationship for several years. Their bodies were discovered inside a Tata Altroz car that was locked from the inside.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm