ಬ್ರೇಕಿಂಗ್ ನ್ಯೂಸ್
16-02-26 04:01 pm HK News Desk ಕ್ರೈಂ
ಮಂಗಳೂರು, ಫೆ.16: ದಾವಣಗೆರೆ ಬೆನ್ನಲ್ಲೇ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೂ ಕಿಡಿಗೇಡಿಗಳು ಬಾಂಬ್ ಬೆದರಿಕೆಯ ಇ-ಮೇಲ್ ಕಳಿಸಿದ್ದಾರೆ. RDX , IED ರೀತಿಯ ಸ್ಫೋಟಕ ಬಳಸಿ ಕೋರ್ಟನ್ನು ಸ್ಪೋಟಿಸುವ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಸೋಮವಾರ ಮಧ್ಯಾಹ್ನ ಎಂದಿನಂತೆ ಕೋರ್ಟ್ ಕಲಾಪ ನಡೆಯುತ್ತಿದ್ದಾಗಲೇ ವಿಷಯ ಗೊತ್ತಾಗಿದ್ದು ಪೊಲೀಸರು ದೌಡಾಯಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳವೂ ಬಂದು ಪರಿಶೀಲನೆ ಕೈಗೊಂಡಿದೆ. ಪಾರ್ಕಿಂಗ್, ಕೋರ್ಟ್ ಆವರಣ ಸೇರಿದಂತೆ ನ್ಯಾಯಾಲಯದ ಒಳಗಡೆ ತಪಾಸಣೆ ನಡೆಸಿದ್ದಾರೆ. ಮಂಗಳೂರು ಪೊಲೀಸರು ತಪಾಸಣೆ ಕೈಗೊಂಡಿದ್ದು ಯಾವುದೇ ಸ್ಫೋಟಕ ಮಾದರಿ ಪತ್ತೆಯಾಗಿಲ್ಲ. ಈ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಬೆದರಿಕೆ ಸಂದೇಶದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕೋರ್ಟಿಗೂ ಸೋಮವಾರ ಬೆಳಗ್ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಬೆಳಗ್ಗೆ 8.30ರ ವೇಳೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಕೂಡಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಬಂದು ತಪಾಸಣೆ ನಡೆಸಿದೆ. ಶೋಧ ಕಾರ್ಯದ ಬಳಿಕ ಯಾವುದೇ ಅಸಹಜ ವಸ್ತುಗಳು ಸಿಗದ ಕಾರಣ ಅದೊಂದು ಹುಸಿ ಬಾಂಬ್ ಕರೆಯೆಂದು ಪೊಲೀಸರು ನಿರ್ಧರಿಸಿದ್ದು ಕೋರ್ಟ್ ಆವರಣದಲ್ಲಿ ಬಂದೋಬಸ್ತ್ ಹೆಚ್ಚಿಸಿದ್ದಾರೆ.

ಗುಜರಾತಿನ 13 ಶಾಲೆಗಳಿಗೆ ಬೆದರಿಕೆ ಸಂದೇಶ
ಇದೇ ವೇಳೆ, ಗುಜರಾತಿನ ವಡೋದರಾ ಮತ್ತು ಅಹ್ಮದಾಬಾದ್ ನಗರದಲ್ಲಿ 13 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ಹೆಸರನ್ನು ಉಲ್ಲೇಖಿಸಿ, ಗುಜರಾತ್ ಮುಂದೆ ಖಲೀಸ್ತಾನ್ ಆಗಲಿದೆ, ಹಿಂದುಸ್ತಾನ್ ಎರಡಾಗಿ ವಿಭಜನೆ ಆಗಲಿದೆ ಎಂದು ಬರೆಯಲಾಗಿದೆ. ಶಾಲೆಗಳ ಆವರಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಭಯೋತ್ಪಾದಕ ಸಂಘಟನೆ ಕೈವಾಡ ಇದೆಯೇ, ಕಿಡಿಗೇಡಿ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An anonymous email threatening a bomb blast was sent to the District Court premises in Mangaluru on Monday, triggering a major security alert. The email warned of an explosion using RDX and IEDs, prompting immediate action by the police. Security personnel rushed to the spot and launched an extensive search operation across the court complex.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am