ಬ್ರೇಕಿಂಗ್ ನ್ಯೂಸ್
16-02-26 04:01 pm HK News Desk ಕ್ರೈಂ
ಮಂಗಳೂರು, ಫೆ.16: ದಾವಣಗೆರೆ ಬೆನ್ನಲ್ಲೇ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೂ ಕಿಡಿಗೇಡಿಗಳು ಬಾಂಬ್ ಬೆದರಿಕೆಯ ಇ-ಮೇಲ್ ಕಳಿಸಿದ್ದಾರೆ. RDX , IED ರೀತಿಯ ಸ್ಫೋಟಕ ಬಳಸಿ ಕೋರ್ಟನ್ನು ಸ್ಪೋಟಿಸುವ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಸೋಮವಾರ ಮಧ್ಯಾಹ್ನ ಎಂದಿನಂತೆ ಕೋರ್ಟ್ ಕಲಾಪ ನಡೆಯುತ್ತಿದ್ದಾಗಲೇ ವಿಷಯ ಗೊತ್ತಾಗಿದ್ದು ಪೊಲೀಸರು ದೌಡಾಯಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳವೂ ಬಂದು ಪರಿಶೀಲನೆ ಕೈಗೊಂಡಿದೆ. ಪಾರ್ಕಿಂಗ್, ಕೋರ್ಟ್ ಆವರಣ ಸೇರಿದಂತೆ ನ್ಯಾಯಾಲಯದ ಒಳಗಡೆ ತಪಾಸಣೆ ನಡೆಸಿದ್ದಾರೆ. ಮಂಗಳೂರು ಪೊಲೀಸರು ತಪಾಸಣೆ ಕೈಗೊಂಡಿದ್ದು ಯಾವುದೇ ಸ್ಫೋಟಕ ಮಾದರಿ ಪತ್ತೆಯಾಗಿಲ್ಲ. ಈ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಬೆದರಿಕೆ ಸಂದೇಶದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕೋರ್ಟಿಗೂ ಸೋಮವಾರ ಬೆಳಗ್ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಬೆಳಗ್ಗೆ 8.30ರ ವೇಳೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಕೂಡಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಬಂದು ತಪಾಸಣೆ ನಡೆಸಿದೆ. ಶೋಧ ಕಾರ್ಯದ ಬಳಿಕ ಯಾವುದೇ ಅಸಹಜ ವಸ್ತುಗಳು ಸಿಗದ ಕಾರಣ ಅದೊಂದು ಹುಸಿ ಬಾಂಬ್ ಕರೆಯೆಂದು ಪೊಲೀಸರು ನಿರ್ಧರಿಸಿದ್ದು ಕೋರ್ಟ್ ಆವರಣದಲ್ಲಿ ಬಂದೋಬಸ್ತ್ ಹೆಚ್ಚಿಸಿದ್ದಾರೆ.

ಗುಜರಾತಿನ 13 ಶಾಲೆಗಳಿಗೆ ಬೆದರಿಕೆ ಸಂದೇಶ
ಇದೇ ವೇಳೆ, ಗುಜರಾತಿನ ವಡೋದರಾ ಮತ್ತು ಅಹ್ಮದಾಬಾದ್ ನಗರದಲ್ಲಿ 13 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ಹೆಸರನ್ನು ಉಲ್ಲೇಖಿಸಿ, ಗುಜರಾತ್ ಮುಂದೆ ಖಲೀಸ್ತಾನ್ ಆಗಲಿದೆ, ಹಿಂದುಸ್ತಾನ್ ಎರಡಾಗಿ ವಿಭಜನೆ ಆಗಲಿದೆ ಎಂದು ಬರೆಯಲಾಗಿದೆ. ಶಾಲೆಗಳ ಆವರಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಭಯೋತ್ಪಾದಕ ಸಂಘಟನೆ ಕೈವಾಡ ಇದೆಯೇ, ಕಿಡಿಗೇಡಿ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An anonymous email threatening a bomb blast was sent to the District Court premises in Mangaluru on Monday, triggering a major security alert. The email warned of an explosion using RDX and IEDs, prompting immediate action by the police. Security personnel rushed to the spot and launched an extensive search operation across the court complex.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm