ಬ್ರೇಕಿಂಗ್ ನ್ಯೂಸ್
18-02-26 07:42 pm Mangaluru Staffer ಕ್ರೈಂ
ಮಂಗಳೂರು, ಫೆ.18: ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ (22) ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟ್ಮೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ನಿನ್ನೆ ರಾತ್ರಿ ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬಂದಿದೆ.





ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 22-year-old man from Kerala was found dead in a rented apartment near Kadri Shivabhag in Mangaluru on Tuesday. The deceased, Roshan, a native of Kumbla in Kasaragod district, had been working at an ice cream shop in the city and was staying with friends. He was found unresponsive inside his room after he failed to come out in the morning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm