ಬ್ರೇಕಿಂಗ್ ನ್ಯೂಸ್
20-02-26 02:31 pm Mangalore Correspondent ಕ್ರೈಂ
ಮಂಗಳೂರು, ಫೆ.20: ಬಿಎಸ್ಸೆನ್ನೆಲ್ ಸಂಸ್ಥೆಯ ವತಿಯಿಂದ ಸುಮಾರು 30-40 ವರ್ಷಗಳ ಹಿಂದೆ ಹಾಕಲಾಗಿದ್ದ ತಾಮ್ರದ ವೈರ್ ಗಳನ್ನು ಹೊಂದಿರುವ ಕೇಬಲನ್ನು ಮಣ್ಣಿನಡಿಯಿಂದ ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಕೃತ್ಯ ಬೆಳಕಿಗೆ ಬಂದಿದ್ದು, ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಬಿಎಸ್ಸೆನ್ನೆಲ್ ಕಂಪನಿಯ ಕಚೇರಿಯಲ್ಲಿ ಟೆಲಿಕಾಂ ಟೆಕ್ನೀಶಿಯನ್ ಆಗಿರುವ ಕೆಕೆ ಚಾಮಿ(55), ಕಚೇರಿಯಲ್ಲಿ ಸಹಾಯಕ ಅಧೀಕ್ಷಕ ಹುದ್ದೆಯಲ್ಲಿದ್ದ ತನ್ವೀರ್ ಪಾಷಾ)48) ಮತ್ತು ಕೇಬಲ್ ಆಪರೇಟರ್ ಗುತ್ತಿಗೆ ನೌಕರನಾಗಿರುವ ಮಂಜುನಾಥ್ (35) ಎಂಬವರನ್ನು ಬಂಧಿಸಲಾಗಿದೆ. ಮಂಜುನಾಥ್ ಬಿಎಸ್ಸೆನ್ನೆಲ್ ಕಂಪನಿಯಲ್ಲಿ ಗುತ್ತಿಗೆ ನೌಕರನಾಗಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲು ಕೇಬಲ್ ಜಾಯಿಂಟರ್ ಆಗಿ ಕೆಲಸ ಮಾಡುತ್ತಿದ್ದ.
ಹಿಂದೆ ಬಿಎಸ್ಸೆನ್ನೆಲ್ ಲ್ಯಾಂಡ್ ಫೋನ್ ಬಳಕೆಯಲ್ಲಿದ್ದಾಗ ಕೇಬಲನ್ನು ಭೂಗತವಾಗಿ ಹಾಕಲಾಗಿತ್ತು. ಪ್ರತಿ ಬಳಕೆದಾರನಿಗೂ ಪ್ರತ್ಯೇಕ ತಾಮ್ರದ ಕೇಬಲ್ ವೈರನ್ನು ಒಂದೇ ಪೈಪ್ ಒಳಗಡೆ ಹಾಕಿ ಸಂಪರ್ಕ ನೀಡಲಾಗುತ್ತಿತ್ತು. ಆದರೆ ಈಗ ಮೊಬೈಲ್ ಇನ್ನಿತರ ಖಾಸಗಿ ಕಂಪನಿಗಳ ದೂರವಾಣಿ ಚಾಲ್ತಿಗೆ ಬಂದಿರುವುದರಿಂದ ಹಳೆ ಮಾದರಿಯ ಲ್ಯಾಂಡ್ ಫೋನ್ ಅಗತ್ಯವಿಲ್ಲದೆ ಅದರ ಬಳಕೆ ಇಲ್ಲವಾಗಿದೆ.
ಇದರ ಬಗ್ಗೆ ಮಾಹಿತಿಯಿದ್ದ ಬಿಎಸ್ಸೆನ್ನೆಲ್ ಸಂಸ್ಥೆಯ ಟೆಕ್ನೀಶಿಯನ್ ಕೆಕೆ ಚಾಮಿ ಮತ್ತು ಕಚೇರಿ ಅಧೀಕ್ಷಕ ತನ್ವೀರ್ ಪಾಷಾ, ಮಂಜುನಾಥ್ ಜೊತೆಗೂಡಿ ಹಳೆ ಕಾಲದ ತಾಮ್ರದ ಕೇಬಲನ್ನು ತೆಗೆದು ಮಾರಾಟ ಮಾಡುತ್ತಿದ್ದರು. ನೆಹರು ಮೈದಾನ ಆಸುಪಾಸಿನಲ್ಲಿ ಸೇರಿದಂತೆ ಹಲವೆಡೆ ಹಾಕಿದ್ದ ಕೇಬಲನ್ನು ಒಂದೂವರೆ ವರ್ಷಗಳಿಂದ ತೆಗೆದು ಮಾರಾಟ ಮಾಡಿದ್ದು, ಇದರ ಈಗಿನ ಮಾರುಕಟ್ಟೆ ಮೌಲ್ಯ 70 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಬಿಎಸ್ಸೆನ್ನೆಲ್ ಕಚೇರಿಯ ಜೂನಿಯರ್ ಟೆಲಿಕಾಂ ಆಫೀಸರ್ ವಿನೋದ್ ಶೇಖರ್ ನಾಯ್ಕ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ 45 ಕೇಜಿ ತಾಮ್ರದ ಕೇಬಲ್ ಮತ್ತು ಕೇಬಲ್ ಮಾರಾಟ ಮಾಡಿ ಬಂದಿದ್ದ 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm