ಬ್ರೇಕಿಂಗ್ ನ್ಯೂಸ್
20-02-26 02:31 pm Mangalore Correspondent ಕ್ರೈಂ
ಮಂಗಳೂರು, ಫೆ.20: ಬಿಎಸ್ಸೆನ್ನೆಲ್ ಸಂಸ್ಥೆಯ ವತಿಯಿಂದ ಸುಮಾರು 30-40 ವರ್ಷಗಳ ಹಿಂದೆ ಹಾಕಲಾಗಿದ್ದ ತಾಮ್ರದ ವೈರ್ ಗಳನ್ನು ಹೊಂದಿರುವ ಕೇಬಲನ್ನು ಮಣ್ಣಿನಡಿಯಿಂದ ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಕೃತ್ಯ ಬೆಳಕಿಗೆ ಬಂದಿದ್ದು, ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಬಿಎಸ್ಸೆನ್ನೆಲ್ ಕಂಪನಿಯ ಕಚೇರಿಯಲ್ಲಿ ಟೆಲಿಕಾಂ ಟೆಕ್ನೀಶಿಯನ್ ಆಗಿರುವ ಕೆಕೆ ಚಾಮಿ(55), ಕಚೇರಿಯಲ್ಲಿ ಸಹಾಯಕ ಅಧೀಕ್ಷಕ ಹುದ್ದೆಯಲ್ಲಿದ್ದ ತನ್ವೀರ್ ಪಾಷಾ)48) ಮತ್ತು ಕೇಬಲ್ ಆಪರೇಟರ್ ಗುತ್ತಿಗೆ ನೌಕರನಾಗಿರುವ ಮಂಜುನಾಥ್ (35) ಎಂಬವರನ್ನು ಬಂಧಿಸಲಾಗಿದೆ. ಮಂಜುನಾಥ್ ಬಿಎಸ್ಸೆನ್ನೆಲ್ ಕಂಪನಿಯಲ್ಲಿ ಗುತ್ತಿಗೆ ನೌಕರನಾಗಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲು ಕೇಬಲ್ ಜಾಯಿಂಟರ್ ಆಗಿ ಕೆಲಸ ಮಾಡುತ್ತಿದ್ದ.
ಹಿಂದೆ ಬಿಎಸ್ಸೆನ್ನೆಲ್ ಲ್ಯಾಂಡ್ ಫೋನ್ ಬಳಕೆಯಲ್ಲಿದ್ದಾಗ ಕೇಬಲನ್ನು ಭೂಗತವಾಗಿ ಹಾಕಲಾಗಿತ್ತು. ಪ್ರತಿ ಬಳಕೆದಾರನಿಗೂ ಪ್ರತ್ಯೇಕ ತಾಮ್ರದ ಕೇಬಲ್ ವೈರನ್ನು ಒಂದೇ ಪೈಪ್ ಒಳಗಡೆ ಹಾಕಿ ಸಂಪರ್ಕ ನೀಡಲಾಗುತ್ತಿತ್ತು. ಆದರೆ ಈಗ ಮೊಬೈಲ್ ಇನ್ನಿತರ ಖಾಸಗಿ ಕಂಪನಿಗಳ ದೂರವಾಣಿ ಚಾಲ್ತಿಗೆ ಬಂದಿರುವುದರಿಂದ ಹಳೆ ಮಾದರಿಯ ಲ್ಯಾಂಡ್ ಫೋನ್ ಅಗತ್ಯವಿಲ್ಲದೆ ಅದರ ಬಳಕೆ ಇಲ್ಲವಾಗಿದೆ.
ಇದರ ಬಗ್ಗೆ ಮಾಹಿತಿಯಿದ್ದ ಬಿಎಸ್ಸೆನ್ನೆಲ್ ಸಂಸ್ಥೆಯ ಟೆಕ್ನೀಶಿಯನ್ ಕೆಕೆ ಚಾಮಿ ಮತ್ತು ಕಚೇರಿ ಅಧೀಕ್ಷಕ ತನ್ವೀರ್ ಪಾಷಾ, ಮಂಜುನಾಥ್ ಜೊತೆಗೂಡಿ ಹಳೆ ಕಾಲದ ತಾಮ್ರದ ಕೇಬಲನ್ನು ತೆಗೆದು ಮಾರಾಟ ಮಾಡುತ್ತಿದ್ದರು. ನೆಹರು ಮೈದಾನ ಆಸುಪಾಸಿನಲ್ಲಿ ಸೇರಿದಂತೆ ಹಲವೆಡೆ ಹಾಕಿದ್ದ ಕೇಬಲನ್ನು ಒಂದೂವರೆ ವರ್ಷಗಳಿಂದ ತೆಗೆದು ಮಾರಾಟ ಮಾಡಿದ್ದು, ಇದರ ಈಗಿನ ಮಾರುಕಟ್ಟೆ ಮೌಲ್ಯ 70 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಬಿಎಸ್ಸೆನ್ನೆಲ್ ಕಚೇರಿಯ ಜೂನಿಯರ್ ಟೆಲಿಕಾಂ ಆಫೀಸರ್ ವಿನೋದ್ ಶೇಖರ್ ನಾಯ್ಕ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ 45 ಕೇಜಿ ತಾಮ್ರದ ಕೇಬಲ್ ಮತ್ತು ಕೇಬಲ್ ಮಾರಾಟ ಮಾಡಿ ಬಂದಿದ್ದ 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm