ಬ್ರೇಕಿಂಗ್ ನ್ಯೂಸ್
20-02-26 08:44 pm mangalore ಕ್ರೈಂ
ಬೆಂಗಳೂರು, ಫೆ.20 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿರುದ್ಧ ಧ್ವನಿ ಎತ್ತಿ ಸಿಎಂ ಸಿದ್ದರಾಮಯ್ಯ ಅವರನ್ನೇ ಕಟಕಟೆಯಲ್ಲಿ ನಿಲ್ಲುವಂತೆ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ದೂರು ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ನಗರದ ಸಿಟಿ ಸಿವಿಲ್ ಕೋರ್ಟ್ ಬಳಿ ಕೃಷ್ಣ ಅವರನ್ನು ಪೊಲೀಸರು ನಾಟಕೀಯವಾಗಿ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಸಿಸಿಬಿ ಬಂಧನ ಕ್ರಮ ಕೈಗೊಂಡಿದೆ. ಡಿ.ಬಿ. ನಟೇಶ್ ಅವರು ತಮಗೆ ಮುಂಬಡ್ತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸುಮಾರು 1.60 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸಾರ್ವಜನಿಕವಾಗಿ ಆರೋಪಿಸಿದ್ದರು. ಈ ಕುರಿತು ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ವ್ಯಕ್ತಿತ್ವಕ್ಕೆ ಕಳಂಕ ತರಲಾಗುತ್ತಿದೆ ಎಂದು ನಟೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. 'ನಾನು ಯಾವುದೇ ಹಣ ನೀಡಿಲ್ಲ, ಕೃಷ್ಣ ಅವರು ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಆಧಾರ ರಹಿತ' ಎಂದು ನಟೇಶ್ ದೂರಿನಲ್ಲಿ ತಿಳಿಸಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು.
ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಕೆಲಸದ ನಿಮಿತ್ತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಆಗಮಿಸಿದ್ದರು. ಈ ಬಗ್ಗೆ ಮುನ್ಸೂಚನೆ ಪಡೆದಿದ್ದ ಸಿಸಿಬಿ ಪೊಲೀಸರು, ಕೋರ್ಟ್ ಆವರಣದ ಬಳಿಯೇ ಅವರನ್ನು ವಶಕ್ಕೆ ಪಡೆದಿದ್ದಾರೆ. ಹಠಾತ್ ನಡೆದ ಈ ಬೆಳವಣಿಗೆಯಿಂದ ಕೋರ್ಟ್ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm