ಬ್ರೇಕಿಂಗ್ ನ್ಯೂಸ್
20-02-26 08:44 pm mangalore ಕ್ರೈಂ
ಬೆಂಗಳೂರು, ಫೆ.20 ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿರುದ್ಧ ಧ್ವನಿ ಎತ್ತಿ ಸಿಎಂ ಸಿದ್ದರಾಮಯ್ಯ ಅವರನ್ನೇ ಕಟಕಟೆಯಲ್ಲಿ ನಿಲ್ಲುವಂತೆ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ದೂರು ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ನಗರದ ಸಿಟಿ ಸಿವಿಲ್ ಕೋರ್ಟ್ ಬಳಿ ಕೃಷ್ಣ ಅವರನ್ನು ಪೊಲೀಸರು ನಾಟಕೀಯವಾಗಿ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಸಿಸಿಬಿ ಬಂಧನ ಕ್ರಮ ಕೈಗೊಂಡಿದೆ. ಡಿ.ಬಿ. ನಟೇಶ್ ಅವರು ತಮಗೆ ಮುಂಬಡ್ತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸುಮಾರು 1.60 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸಾರ್ವಜನಿಕವಾಗಿ ಆರೋಪಿಸಿದ್ದರು. ಈ ಕುರಿತು ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ವ್ಯಕ್ತಿತ್ವಕ್ಕೆ ಕಳಂಕ ತರಲಾಗುತ್ತಿದೆ ಎಂದು ನಟೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. 'ನಾನು ಯಾವುದೇ ಹಣ ನೀಡಿಲ್ಲ, ಕೃಷ್ಣ ಅವರು ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಆಧಾರ ರಹಿತ' ಎಂದು ನಟೇಶ್ ದೂರಿನಲ್ಲಿ ತಿಳಿಸಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು.
ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಕೆಲಸದ ನಿಮಿತ್ತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಆಗಮಿಸಿದ್ದರು. ಈ ಬಗ್ಗೆ ಮುನ್ಸೂಚನೆ ಪಡೆದಿದ್ದ ಸಿಸಿಬಿ ಪೊಲೀಸರು, ಕೋರ್ಟ್ ಆವರಣದ ಬಳಿಯೇ ಅವರನ್ನು ವಶಕ್ಕೆ ಪಡೆದಿದ್ದಾರೆ. ಹಠಾತ್ ನಡೆದ ಈ ಬೆಳವಣಿಗೆಯಿಂದ ಕೋರ್ಟ್ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm