ಬ್ರೇಕಿಂಗ್ ನ್ಯೂಸ್
20-02-26 08:54 pm mangalore ಕ್ರೈಂ
ಶಿವಮೊಗ್ಗ, ಫೆ.20 ಗಂಡ ಸತ್ತ ಒಂದೇ ವಾರಕ್ಕೆ ಆತನ ಪತ್ನಿಯ ಹಿಂದೆ ಬಿದ್ದ ಕಾನ್ಸ್ ಟೇಬಲ್ ಒಬ್ಬಾತ ಮೆಸೇಜ್ ಮಾಡಿ ಪೀಡಿಸಿದ್ದಾನೆ. ಪೊಲೀಸ್ ಪೇದೆಯ ಕಿರುಕುಳ ತಾಳಲಾರದೇ ಮಹಿಳೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಸಿದ್ದಾಪುರದಲ್ಲಿ ನಡೆದಿದೆ.
ಫೆಬ್ರವರಿ 14ರಂದು ಕೆಎಸ್ ಐ ಎಸ್ ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಗದೀಶ್ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ವೇಳೆ, ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ತೀರ್ಥಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮೋಹನ್, ಜಗದೀಶ್ ಅವರ ಪತ್ನಿ ಸ್ವಾತಿಗೆ ಮೆಸೇಜ್ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೊಂಡ ಸ್ವಾತಿ, ಪೊಲೀಸ್ ಪೇದೆಯ ಫೇಸ್ಬುಕ್ ಖಾತೆಯನ್ನು ಬ್ಲಾಕ್ ಮಾಡಿದ್ದರು.
ಇದರ ಬಳಿಕ ಸ್ವಾತಿಗೆ ಮತ್ತೊಂದು ಖಾತೆಯಿಂದ ಪೇದೆ ಮೋಹನ್ ಮೆಸೇಜ್ ಮಾಡತೊಡಗಿದ್ದರು. ಇದರಿಂದ ಬೇಸತ್ತ ಸ್ವಾತಿ, ಭದ್ರಾವತಿಯ ಹೊಸ ಸಿದ್ದಾಪುರದ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕು ಮುನ್ನ ಸ್ವಾತಿ ತನ್ನ ತಾಯಿಗೆ ವಾಟ್ಸ್ ಆಪ್ ಮೂಲಕ ಮೆಸೇಜ್ ಮಾಡಿದ್ದು, ತೀರ್ಥಹಳ್ಳಿಯ ಪೊಲೀಸ್ ಪೇದೆ ಮೋಹನ್ ಹೆಸರು ಉಲ್ಲೇಖಿಸಿದ್ದಾರೆ. ಫೇಸ್ ಬುಕ್ ನಲ್ಲಿ ಮೋಹನ್ ಎಂಬ ಪೊಲೀಸ್ ನನಗೆ ಮೆಸೇಜ್ ಮಾಡಿದ್ದರು. ಅದಕ್ಕೆ ನಾನು ಅವರನ್ನು ಬ್ಲಾಕ್ ಮಾಡಿದ್ದೆ. ಆತ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂಬುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮೃತ ಜಗದೀಶ್ ಹಾಗೂ ಸ್ವಾತಿ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದೀಗ ತಂದೆ- ತಾಯಿ ಇಬ್ಬರನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಮೃತ ಸ್ವಾತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಾವತಿ ತಾಲ್ಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident reported from Siddapur in Bhadravati town of Shivamogga district, a woman allegedly died by suicide following harassment by a police constable, just a week after her husband’s death.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm