ಬ್ರೇಕಿಂಗ್ ನ್ಯೂಸ್
20-02-26 09:07 pm HK News Desk ಕ್ರೈಂ
ಗದಗ, ಫೆ 20: ಲಕ್ಕುಂಡಿ ನಿಧಿ ಪತ್ತೆಯ ಪ್ರಕರಣದ ಬೆನ್ನಲ್ಲೇ, ಇದೀಗ ಮತ್ತೊಂದು ನಿಧಿ ಶೋಧದ ಮೋಸದ ದೊಡ್ಡ ಜಾಲ ಬಯಲಾಗಿದೆ. ಹಳೆ ಪ್ರಕರಣ ಇದಾಗಿದ್ದು, ಹೊಸ ತಿರುವು ಸಿಕ್ಕಿದೆ. 01-01-2021 ರಿಂದ 30-05-2022ರ ಅವಧಿಯಲ್ಲಿ ನಡೆದ ನಿಧಿ ಶೋಧ ಪ್ರಕರಣದಲ್ಲಿ ಪೊಲೀಸರ ತನಿಖೆ ವೇಳೆ ನಕಲಿ ಬಂಗಾರದ ಬಿಸ್ಕತ್ ಪತ್ತೆಯಾಗಿದ್ದು, ನಿಧಿ ಹೆಸರಿನಲ್ಲಿ ನಡೆದ ಅಂತಾರಾಜ್ಯ ಮಟ್ಟದ ಮೋಸ ಇದೀಗ ಬಹಿರಂಗವಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದು, ಅಂತಾರಾಜ್ಯ ಮೋಸಗಾರರ ಜಾಲವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದು, ಅಂದು ಲಕ್ಕುಂಡಿಯಲ್ಲಿ ನಿಧಿ ಹುಡುಕಿ ಕೊಡುವುದಾಗಿ ಮೋಸ ಮಾಡಿದ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಉತ್ತರಾಖಂಡದ ಕಿಂಗ್ಪಿನ್ ಬಂಧನ:
ಉತ್ತರಾಖಂಡದ ಕಾಶಿಪುರ ಮೂಲದ ಹಜರತ್ ಮೌಲ್ವಿ ಎಂಬಾತನೇ ಈ ನಿಧಿ ಶೋಧದ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಈತನನ್ನು ಗದಗ ಪೊಲೀಸರು ಈಗ ಬಂಧಿಸಿದ್ದಾರೆ. ಆರೋಪಿಯು ಆರು ಅಡಿ ಆಳದ ಗುಂಡಿ ತೆಗೆಸಿ, ಅದರಲ್ಲಿ ಹಂಡಿ ಇಟ್ಟು ಹಂಡಿಯೊಳಗೆ ಬಂಗಾರದ ನಾಣ್ಯಗಳಿವೆ ಎಂದು ಹಲವರನ್ನು ನಂಬಿಸಿ ಜನರಿಗೆ ಮೋಸ ಮಾಡುತ್ತಿದ್ದ. ಹೀಗೆ ಹಲವರಿಗೆ ಮೋಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಜರತ್ ಮೌಲ್ವಿಯನ್ನು ಬಂಧಿಸಿರುವುದಾಗಿ ಎಸ್ಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.
ಮೋಸದ ಜಾಲ ಶುರುವಾಗಿದ್ದು ಹೇಗೆ? :
ಧಾರವಾಡ ಮೂಲದ ಬಸೀರಾಬೇಗಂ ಎಂಬ ಮಹಿಳೆಗೆ, ಶಾದಿ ಡಾಟ್ ಕಾಂ ಮೂಲಕ ಉತ್ತರಾಖಂಡದ ಈ ಹಜರತ್ ಮೌಲ್ವಿಯ ಪರಿಚಯವಾಗಿತ್ತು. ಬಸೀರಾಬೇಗಂ ಧಾರವಾಡದಲ್ಲಿ ಗ್ಯಾಸ್ ಎಜೆನ್ಸಿ ಇಟ್ಟುಕೊಂಡಿದ್ದು, ಅನಿರೀಕ್ಷಿತವಾಗಿ ಆದ ಭೇಟಿಯ ವೇಳೆ ತನಗೆ ಮಾಟ - ಮಂತ್ರ ಹಾಗೂ ನಿಧಿ ತೆಗೆಯುವ ವಿದ್ಯೆ ಗೊತ್ತಿದೆ ಎಂದು ಮೌಲ್ವಿ ಈ ವೇಳೆ ಹೇಳಿಕೊಂಡಿದ್ದ. ಇದನ್ನೂ ಬಸೀರಾಬೇಗಂ ನಂಬಿದ್ದಳು. ನಂತರ ಬಸೀರಾಬೇಗಂ ಮೂಲಕ ಗದಗದ ಇಕ್ಬಾಲ್, ಗೂಳಪ್ಪ, ಸಣ್ಣಬಸಪ್ಪ ಹಾಗೂ ದೊಡ್ಡಬಸಪ್ಪ ಹೀಗೆ...ಒಬ್ಬರಿಗೊಬ್ಬರ ಪರಿಚಯ ಒಂದು ಕೊಂಡಿ ರೂಪದಲ್ಲಿ ಬೆಳೆದಿತ್ತು. ಸಣ್ಣಬಸಪ್ಪ ಹಾಗೂ ದೊಡ್ಡಬಸಪ್ಪ ಅವರ ಜಮೀನಿನಲ್ಲಿ ನಿಧಿ ಇದೆ ಅಂತ ಹೇಳಿ ನಂಬಿಸಿ ಅಗೆಯಿಸಲಾಗಿತ್ತು. ಅದಕ್ಕೂ ಮುನ್ನ ಗದಗದ ಅಂಗಡಿಯಲ್ಲಿ ಹಳೆ ಬಿಂದಿಗೆಯನ್ನು ಖರೀದಿ ಮಾಡಿ, ಅದನ್ನು ಜಮೀನಿನಲ್ಲಿ ಹುದುಗಿಸಿದ್ದ. ಬಳಿಕ ನಿಧಿ ಶೋಧ ಮಾಡಿದ ಹಾಗೇ ನಾಟಕ ಮಾಡಿದ್ದ ಹಜರತ್, ಎಲ್ಲರಿಗೂ ಮೋಸ ಮಾಡಿದ್ದ. ಅಲ್ಲದೇ, ಸಣ್ಣಬಸಪ್ಪ ಮತ್ತು ದೊಡ್ಡ ಬಸಪ್ಪರಿಂದ ಹಣದ ಬೇಡಿಕೆ ಇಟ್ಟಿದ್ದನು. ಹಣ ನೀಡಲು ನಿರಾಕರಿಸಿದಾಗ ಕೋಪಗೊಂಡ ಮೌಲ್ವಿ, ಚಿನ್ನವೆಲ್ಲಾ ಮಣ್ಣಾಗಿದೆ ಎಂದು ಹೇಳಿ ಎಸ್ಕೇಪ್ ಆಗಿದ್ದನು. ಈಗ ಈ ಹಜರತ್ ಮೌಲ್ವಿಯನ್ನು ಅರೆಸ್ಟ್ ಮಾಡಿದ್ದು, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm