ಬ್ರೇಕಿಂಗ್ ನ್ಯೂಸ್
20-02-26 09:07 pm HK News Desk ಕ್ರೈಂ
ಗದಗ, ಫೆ 20: ಲಕ್ಕುಂಡಿ ನಿಧಿ ಪತ್ತೆಯ ಪ್ರಕರಣದ ಬೆನ್ನಲ್ಲೇ, ಇದೀಗ ಮತ್ತೊಂದು ನಿಧಿ ಶೋಧದ ಮೋಸದ ದೊಡ್ಡ ಜಾಲ ಬಯಲಾಗಿದೆ. ಹಳೆ ಪ್ರಕರಣ ಇದಾಗಿದ್ದು, ಹೊಸ ತಿರುವು ಸಿಕ್ಕಿದೆ. 01-01-2021 ರಿಂದ 30-05-2022ರ ಅವಧಿಯಲ್ಲಿ ನಡೆದ ನಿಧಿ ಶೋಧ ಪ್ರಕರಣದಲ್ಲಿ ಪೊಲೀಸರ ತನಿಖೆ ವೇಳೆ ನಕಲಿ ಬಂಗಾರದ ಬಿಸ್ಕತ್ ಪತ್ತೆಯಾಗಿದ್ದು, ನಿಧಿ ಹೆಸರಿನಲ್ಲಿ ನಡೆದ ಅಂತಾರಾಜ್ಯ ಮಟ್ಟದ ಮೋಸ ಇದೀಗ ಬಹಿರಂಗವಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದು, ಅಂತಾರಾಜ್ಯ ಮೋಸಗಾರರ ಜಾಲವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದು, ಅಂದು ಲಕ್ಕುಂಡಿಯಲ್ಲಿ ನಿಧಿ ಹುಡುಕಿ ಕೊಡುವುದಾಗಿ ಮೋಸ ಮಾಡಿದ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಉತ್ತರಾಖಂಡದ ಕಿಂಗ್ಪಿನ್ ಬಂಧನ:
ಉತ್ತರಾಖಂಡದ ಕಾಶಿಪುರ ಮೂಲದ ಹಜರತ್ ಮೌಲ್ವಿ ಎಂಬಾತನೇ ಈ ನಿಧಿ ಶೋಧದ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಈತನನ್ನು ಗದಗ ಪೊಲೀಸರು ಈಗ ಬಂಧಿಸಿದ್ದಾರೆ. ಆರೋಪಿಯು ಆರು ಅಡಿ ಆಳದ ಗುಂಡಿ ತೆಗೆಸಿ, ಅದರಲ್ಲಿ ಹಂಡಿ ಇಟ್ಟು ಹಂಡಿಯೊಳಗೆ ಬಂಗಾರದ ನಾಣ್ಯಗಳಿವೆ ಎಂದು ಹಲವರನ್ನು ನಂಬಿಸಿ ಜನರಿಗೆ ಮೋಸ ಮಾಡುತ್ತಿದ್ದ. ಹೀಗೆ ಹಲವರಿಗೆ ಮೋಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಜರತ್ ಮೌಲ್ವಿಯನ್ನು ಬಂಧಿಸಿರುವುದಾಗಿ ಎಸ್ಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.
ಮೋಸದ ಜಾಲ ಶುರುವಾಗಿದ್ದು ಹೇಗೆ? :
ಧಾರವಾಡ ಮೂಲದ ಬಸೀರಾಬೇಗಂ ಎಂಬ ಮಹಿಳೆಗೆ, ಶಾದಿ ಡಾಟ್ ಕಾಂ ಮೂಲಕ ಉತ್ತರಾಖಂಡದ ಈ ಹಜರತ್ ಮೌಲ್ವಿಯ ಪರಿಚಯವಾಗಿತ್ತು. ಬಸೀರಾಬೇಗಂ ಧಾರವಾಡದಲ್ಲಿ ಗ್ಯಾಸ್ ಎಜೆನ್ಸಿ ಇಟ್ಟುಕೊಂಡಿದ್ದು, ಅನಿರೀಕ್ಷಿತವಾಗಿ ಆದ ಭೇಟಿಯ ವೇಳೆ ತನಗೆ ಮಾಟ - ಮಂತ್ರ ಹಾಗೂ ನಿಧಿ ತೆಗೆಯುವ ವಿದ್ಯೆ ಗೊತ್ತಿದೆ ಎಂದು ಮೌಲ್ವಿ ಈ ವೇಳೆ ಹೇಳಿಕೊಂಡಿದ್ದ. ಇದನ್ನೂ ಬಸೀರಾಬೇಗಂ ನಂಬಿದ್ದಳು. ನಂತರ ಬಸೀರಾಬೇಗಂ ಮೂಲಕ ಗದಗದ ಇಕ್ಬಾಲ್, ಗೂಳಪ್ಪ, ಸಣ್ಣಬಸಪ್ಪ ಹಾಗೂ ದೊಡ್ಡಬಸಪ್ಪ ಹೀಗೆ...ಒಬ್ಬರಿಗೊಬ್ಬರ ಪರಿಚಯ ಒಂದು ಕೊಂಡಿ ರೂಪದಲ್ಲಿ ಬೆಳೆದಿತ್ತು. ಸಣ್ಣಬಸಪ್ಪ ಹಾಗೂ ದೊಡ್ಡಬಸಪ್ಪ ಅವರ ಜಮೀನಿನಲ್ಲಿ ನಿಧಿ ಇದೆ ಅಂತ ಹೇಳಿ ನಂಬಿಸಿ ಅಗೆಯಿಸಲಾಗಿತ್ತು. ಅದಕ್ಕೂ ಮುನ್ನ ಗದಗದ ಅಂಗಡಿಯಲ್ಲಿ ಹಳೆ ಬಿಂದಿಗೆಯನ್ನು ಖರೀದಿ ಮಾಡಿ, ಅದನ್ನು ಜಮೀನಿನಲ್ಲಿ ಹುದುಗಿಸಿದ್ದ. ಬಳಿಕ ನಿಧಿ ಶೋಧ ಮಾಡಿದ ಹಾಗೇ ನಾಟಕ ಮಾಡಿದ್ದ ಹಜರತ್, ಎಲ್ಲರಿಗೂ ಮೋಸ ಮಾಡಿದ್ದ. ಅಲ್ಲದೇ, ಸಣ್ಣಬಸಪ್ಪ ಮತ್ತು ದೊಡ್ಡ ಬಸಪ್ಪರಿಂದ ಹಣದ ಬೇಡಿಕೆ ಇಟ್ಟಿದ್ದನು. ಹಣ ನೀಡಲು ನಿರಾಕರಿಸಿದಾಗ ಕೋಪಗೊಂಡ ಮೌಲ್ವಿ, ಚಿನ್ನವೆಲ್ಲಾ ಮಣ್ಣಾಗಿದೆ ಎಂದು ಹೇಳಿ ಎಸ್ಕೇಪ್ ಆಗಿದ್ದನು. ಈಗ ಈ ಹಜರತ್ ಮೌಲ್ವಿಯನ್ನು ಅರೆಸ್ಟ್ ಮಾಡಿದ್ದು, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm