ಬ್ರೇಕಿಂಗ್ ನ್ಯೂಸ್
21-02-26 05:50 pm HK News Desk ಕ್ರೈಂ
ಗದಗ, ಫೆ.21: ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯಲ್ಲಿ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿ ಶಾಸಕರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದೆ.
ಬಂಧಿತರಲ್ಲಿ ಶಾಸಕ ಚಂದ್ರು ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರುನಾಯ್ಕ್ ಸೇರಿದ್ದಾರೆ. ದಾಳಿಯ ವೇಳೆ ಕಂತೆ ಕಂತೆ ನಗದು ಹಣ ವಶಪಡಿಸಿರುವುದಾಗಿ ತಿಳಿದುಬಂದಿದೆ.

ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಕಮಿಷನ್ ಆರೋಪ
ಸಂಕದಾಳ ಗ್ರಾಮದ ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ 1 ಕೋಟಿ ರೂಪಾಯಿ ಮೌಲ್ಯ ನಿಗದಿಯಾಗಿತ್ತು. ಕಾಮಗಾರಿಯನ್ನು ಒಪ್ಪಿಸಲು ಕ್ಲಾಸ್-1 ಗುತ್ತಿಗೆದಾರ ವಿಜಯ ಪೂಜಾರ ಅವರ ಬಳಿ 11 ಲಕ್ಷ ರೂಪಾಯಿ ಕಮಿಷನ್ ಬೇಡಿಕೆಯಿಟ್ಟಿದ್ದರೆಂದು ಆರೋಪಿಸಲಾಗಿದೆ. ಮೊದಲ ಹಂತದ ಹಣವಾಗಿ 5 ಲಕ್ಷ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ನಡೆಸಿ ಬಂಧಿಸಿದ್ದಾರೆ.
ಕಮಿಷನ್ ನೀಡಲು ನಿರಾಕರಿಸಿದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಬಲೆ ಬೀಸಲಾಗಿತ್ತು. ಮುಂಗಡ ಹಣ ಹಸ್ತಾಂತರದ ಕ್ಷಣದಲ್ಲೇ ಕಾರ್ಯಾಚರಣೆ ನಡೆಸಿ ಶಾಸಕರನ್ನ ಖೆಡ್ಡಾಕ್ಕೆ ಕೆಡವಲಾಗಿದೆ.
ಆಡಿಯೋ ಸಾಕ್ಷ್ಯ ಆಧಾರವಾಗಿ ಎಫ್ಐಆರ್
ಲೋಕಾಯುಕ್ತ ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಹಣಕ್ಕೆ ಬೇಡಿಕೆಯಿಟ್ಟಿದ್ದ ಆಡಿಯೋ ದಾಖಲೆ ಲಭ್ಯವಾಗಿತ್ತು. ಆ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಇಂದು ಹಣ ಸ್ವೀಕಾರದ ವೇಳೆ ಟ್ರ್ಯಾಪ್ ಮಾಡಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಬಾಲಾಜಿ ಆಸ್ಪತ್ರೆಯಲ್ಲಿ ಬಂಧನವಾದ ನಂತರ ಶಾಸಕರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಂಬಂಧಿತ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ಮುಂದುವರೆದಿದೆ.
ರಾಜಕೀಯ ವಲಯದಲ್ಲಿ ಸಂಚಲನ
ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದ ಬಿಜೆಪಿಗೆ ಈ ಬೆಳವಣಿಗೆ ಭಾರೀ ಮುಜುಗರ ತಂದಿದೆ. ತಮ್ಮದೇ ಪಕ್ಷದ ಶಾಸಕ ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ವಿಧಾನಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆ ಆಗಬೇಕು. ನಮ್ಮ ಪಕ್ಷ ಲಂಚ ಸ್ವೀಕಾರವನ್ನು ಯಾವತ್ತೂ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm