ಬ್ರೇಕಿಂಗ್ ನ್ಯೂಸ್
22-02-26 09:32 pm HK News Desk ಕ್ರೈಂ
ನವದೆಹಲಿ, ಫೆ.22: ರಾಜಸ್ಥಾನದ ಜೋಧಪುರ ಜಿಲ್ಲೆಯ ಮನಾಯಿ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ವಧುಗಳಿಬ್ಬರು ವಿಷ ಸೇವನೆಗೊಳಗಾಗಿ ನಿಗೂಢ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಶನಿವಾರ ವಿವಾಹವಾಗಬೇಕಿದ್ದ ಸೋದರಿಯರಾದ ಶೋಭಾ (25) ಮತ್ತು ವಿಮ್ಲಾ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.
ಫೆಬ್ರವರಿ 21ರಂದು ಇಬ್ಬರು ಸಹೋದರಿಯರ ಮದುವೆ ಒಂದೇ ದಿನ ನಿಗದಿಯಾಗಿತ್ತು. ಫೆಬ್ರವರಿ 20ರ ರಾತ್ರಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದಿದ್ದವು. ಕುಟುಂಬಸ್ಥರು, ಬಂಧು ಬಳಗದವರ ಸಮ್ಮುಖದಲ್ಲಿ ಮನೆ ಸಂಭ್ರಮದ ವಾತಾವರಣದಲ್ಲಿತ್ತು. ಸಂಭ್ರಮ ಮುಗಿಸಿದ ಸಹೋದರಿಯರು ಮಧ್ಯರಾತ್ರಿ ಸುಮಾರಿಗೆ ತಮ್ಮ ಕೊಠಡಿಗೆ ವಿಶ್ರಾಂತಿಗೆ ತೆರಳಿದ್ದಾರೆ.
ಆದರೆ ಬೆಳಗಿನ ಜಾವ 4 ಗಂಟೆ ವೇಳೆಗೆ ಸಹೋದರಿಯರ ಆರೋಗ್ಯದಲ್ಲಿ ಆಕಸ್ಮಿಕವಾಗಿ ವೈಪರೀತ್ಯದ ಲಕ್ಷಣಗಳು ಗೋಚರಿಸಿವೆ. ತಕ್ಷಣವೇ ಕುಟುಂಬದವರು ಅವರನ್ನು ಜೋಧಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಇಬ್ಬರು ಸಹೋದರಿಯರು ವಿಷ ಪದಾರ್ಥ ಸೇವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ ನಿಖರವಾದ ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ದೃಢಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲಿಗೆ ಪೊಲೀಸರಿಗೆ ತಿಳಿಸಿರಲಿಲ್ಲ. ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂತ್ಯಕ್ರಿಯೆ ನಿಲ್ಲಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಕ್ಕೆ ಹಸ್ತಾಂತರಿಸಿದರು. ಘಟನೆಗೆ ಸಂಬಂಧಿಸಿದಂತೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣವಾದ ಅಂಶಗಳ ಕುರಿತು ಕುಟುಂಬ ಸದಸ್ಯರು ಹಾಗೂ ಸ್ಥಳೀಯರನ್ನು ವಿಚಾರಣೆ ನಡೆಸಲಾಗುತ್ತಿದೆ. ಮದುವೆ ಸಂಭ್ರಮಕ್ಕೆ ಸಜ್ಜಾಗಿದ್ದ ಮನೆ ಒಂದೇ ಕ್ಷಣದಲ್ಲಿ ಶೋಕದಲ್ಲಿ ಮುಳುಗಿರುವ ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm