ಬ್ರೇಕಿಂಗ್ ನ್ಯೂಸ್
22-02-26 10:00 pm HK News Desk ಕ್ರೈಂ
ನವದೆಹಲಿ, ಫೆ.22: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ನಡೆದ ಸೇನಾ ಪಡೆಯ ಕಾರ್ಯಾಚರಣೆಯಲ್ಲಿ ಜೈಶ್ ಇ -ಮಹಮ್ಮದ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ. ಪರ್ವತ ಪ್ರದೇಶ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಸೈನಿಕರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಗುಪ್ತಚರ ಬ್ಯೂರೋ ಮತ್ತು ಇತರ ಗುಪ್ತಚರ ಮೂಲಗಳಿಂದ ಬಂದ ಮಾಹಿತಿಯ ಮೇರೆಗೆ, ಸೇನೆ, ಪೊಲೀಸರು ಮತ್ತು ಅರೆಸೈನಿಕ ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಿಶ್ತ್ವಾರ್ನ ಚತ್ರೂ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ, ಇಬ್ಬರು ಉಗ್ರರು ಹತರಾಗಿದ್ದು ತಿಳಿದುಬಂದಿತ್ತು. ಎನ್ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಸಂಜೆಯ ವೇಳೆಗೆ, ಇಂಡಿಯಾ ಟಿವಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಬಗ್ಗೆ ಮಾಹಿತಿ ನೀಡಿದೆ.
ಎನ್ಕೌಂಟರ್ ನಲ್ಲಿ ಹತನಾಗಿರುವ ಪಾಕಿಸ್ತಾನ ಮೂಲದ ಜೈಶ್ ಉಗ್ರ ಸೈಫುಲ್ಲಾ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ. ಜನವರಿ 18 ರಂದು ನಡೆದ ಎನ್ಕೌಂಟರ್ನಲ್ಲಿ ಪ್ಯಾರಾ ಕಮಾಂಡೋ ಸಾವನ್ನಪ್ಪಿ ಇತರರು ಗಾಯಗೊಂಡ ನಂತರ, ಭದ್ರತಾ ಪಡೆಗಳು ಚತ್ರೂ ಮತ್ತು ಕಿಶ್ತ್ವಾರ್ನ ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸರ ಜೊತೆಗಿದ್ದ ಟೈಸನ್ ಎಂಬ ಗೂಢಚರ್ಯೆ ಮಾಡುತ್ತಿದ್ದ ಜರ್ಮನ್ ಶೆಫರ್ಡ್ ನಾಯಿ ಗುಂಡೇಟಿಗೆ ಒಳಗಾಗಿದೆ. ಕೂಡಲೇ ಅದನ್ನು ಹೆಲಿಕಾಪ್ಟರ್ ನಲ್ಲಿ ಏರ್ ಲಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ..
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm